ಸುಬ್ರಹ್ಮಣ್ಯ ಜ.12.: ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ನಡುಗಲ್ಲಿನ ವಿಕಲಚೇತನ ಮಹಿಳೆ ಮೀನಾಕ್ಷಿ ಅವರಿಗೆ ಮನೆ ನಿರ್ಮಿಸಲು ಧನಸಹಾಯವನ್ನು ಶನಿವಾರ ರೋಟರಿ ಜಿಲ್ಲಾ3181 ಇದರ ನಿಕಟ ಪೂರ್ವ ಡಿಸ್ಟ್ರಿಕ್ಟ್ ಗವರ್ನರ್ ಎಚ್.ಆರ್. ಕೇಶವ ಅವರು ಹಸ್ತಾಂತರಿಸಿದರು.
ಪಂಜ ಸಮೀಪದ ಪಲ್ಲೋಡಿ ಎಂಬಲ್ಲಿ ಮೀನಾಕ್ಷಿ ಅವರು ಸುಬ್ರಹ್ಮಣ್ಯದ ಧಣಿವರಿಯದ ನಾಯಕ ಪ್ರಶಸ್ತಿ ಪುರಸ್ಕೃತ ಡಾ. ರವಿ ಕಕ್ಕೆ ಪದವು ಅವರ ವಿಶೇಷ ಮುತುವರ್ಜಿ ಹಾಗೂ ಸಹಾಯದಿಂದ ಗ್ರಾಮ ಪಂಚಾಯತಿ ಪಂಜ ,ದಾನಿಗಳು, ಹಾಗೂ ಸಂಘ ಸಂಸ್ಥೆಗಳ ನೆರವಿನಿಂದ ಸ್ವಂತ ವಾಸದ ಮನೆಯನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ಮನೆಯ ಬಹುತೇಕ ಕೆಲಸ ಕಾರ್ಯಗಳು ಆಗಿದ್ದು ಇನ್ನೂ ಪೂರ್ಣಗೊಳ್ಳಲು ದಾನಿಗಳಿಂದ ಸಹಾಯಧನದ ಅಗತ್ಯವಿತ್ತು .ಆ ನಿಟ್ಟಿನಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನವರು ಈಗಾಗಲೇ ಮನೆ ನಿರ್ಮಿಸಲು ಬೇಕಾದ ಸಿಮೆಂಟ್, ಬಾಗಿಲು, ಕಿಟಕಿ ಹೀಗೆ ಸುಮಾರು ಐವತ್ತು ಸಾವಿರ ರೂಪಾಯಿಗಳ ವಸ್ತುಗಳನ್ನು ನೀಡಿದ್ದು ಶನಿವಾರ ರೋಟರಿ ಜಿಲ್ಲಾ3181 ನಿಕಟ ಪೂರ್ವ ಗವರ್ನರ್ ಅವರ ಮೂಲಕ ಧನಸಹಾಯವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಅಧ್ಯಕ್ಷ ಚಂದ್ರಶೇಖರ ನಾಯರ್ ,ಜೋನಲ್ ಲೆಫ್ಟಿನೆಂಟ್ ವಿಶ್ವನಾಥ ನಡುತೋಟ, ಪೂರ್ವ ಅಧ್ಯಕ್ಷರುಗಳಾದ ಸೀತಾರಾಮ ಎಣ್ಣೆ ಮಜಲ್, ವಿಜಯಕುಮಾರ , ಹಿರಿಯ ಸದಸ್ಯ ಸುದರ್ಶನ ಶೆಟ್ಟಿ, ಸದಸ್ಯ ಸಲೀಂ, ಆರ್ಯಭಟ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ ಡಾ. ರವಿ ಕಕ್ಕೆ ಪದವು, ಮತ್ತು ಮೀನಾಕ್ಷಿ ಹಾಗು ಅವರ ಮಗ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ರವಿಕಕ್ಕೆ ಪದವು ಅವರನ್ನು ಜಿಲ್ಲಾ ಗವರ್ನರ್ ಅವರು ಶಾಲು ಹೊಂದಿಸಿ ಗೌರವಿಸಿದರು. ಮನೆ ಪೂರ್ಣಗೊಳ್ಳಲು ಇನ್ನಷ್ಟು ಹಣದ ಅವಶ್ಯಕತೆ ಇದ್ದು ದಾನಿಗಳು ಸಹಾಯ ಮಾಡುವಂತೆ ಮೀನಾಕ್ಷಿ ಅವರು ಕೋರಿರುತ್ತಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…