ಕಡಬ,ಅಲಂಕಾರು: ಎರಡು ತಿಂಗಳ ಬಾಣಂತಿ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಜ.10ರಂದು ಸಂಭವಿಸಿದೆ. ಕಡಬ ತಾಲೂಕು ಆಲಂಕಾರು ಗ್ರಾಮದ ಕಮ್ಮಿತ್ತಿಲು ದಯಾನಂದ ಗೌಡರ ಪತ್ನಿ ಪುಷ್ಪಾವತಿ (34ವ) ಮೃತಪಟ್ಟವರು. ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಇವರು ಬಳಿಕ ಐತ್ತೂರು ಹೊಸಕ್ಲು ತಾಯಿಯ ಮನೆಗೆ ಮೂರು ತಿಂಗಳ ಬಾಣಂತಿ ಆರೈಕೆಗೆ ಹೋಗಿದ್ದು ತಾಯಿ ಮಗು ಆರೋಗ್ಯವಾಗಿದ್ದರು ಎಂದು ಮನೆಯವರು ತಿಳಿಸಿದ್ದಾರೆ.
ಎರಡು ತಿಂಗಳು ಕಳೆದ ನಂತರ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂತಾನ ಹರಣ ಶಸ್ತ್ರ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆ, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜ.10 ರಂದು ಕೊನೆಯುಸಿರೆಳೆದರು.
ಮೃತರು ಪತಿ ದಯಾನಂದ ಗೌಡ, ಪುತ್ರಿಯರಾದ ಎರಡು ತಿಂಗಳ ಹೆಣ್ಣು ಮಗು ಯಶ್ಚಿತಾ, ಗುಣಶ್ರೀ, ಹಂಶಿ, ರಿಷಿಕಾ ರವರನ್ನು ಅಗಲಿದ್ದಾರೆ.
ಈಸಾವಿಗೆ ಮತ್ತು ಮಕ್ಕಳ ಕಣ್ಣೀರಿಗೆ ಯಾರು ಹೊಣೆ: ಮೃತರ ಅಂತ್ಯ ಸಂಸ್ಕಾರದ ವೇಳೆ ನೆರೆದಿದ್ದವರ ಆಕ್ರಂದನ ಮುಗಿಲು ಮುಟ್ಟಿತ್ತು. ಎರಡು ತಿಂಗಳ ಹಸುಗೂಸು ಹಾಗು ಮೂರು ಹೆಣ್ಣುಮಕ್ಕಳ ಕಣ್ಣೀರಿಗೆ ಕಾರಣರು ಯಾರು? ಎಂದು ನೆರೆದವರು ಪ್ರಶ್ನಿಸುತ್ತಿದ್ದರು. ಮೃತಪಟ್ಟ ಪುಷ್ಪಾವತಿಯವರಿಗೆ ಆರೋಗ್ಯದ ಸಮಸ್ಯೆ ಇತ್ತೇ ಎಂದು ಮುಂದಿನ ತನಿಖೆಯಲ್ಲಿ ಮ ಗೊತ್ತಾಗಬೇಕಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಮೃತ ಪುಷ್ಪಾವತಿ ಅವರು ಕೃಷಿಕರಾಗಿದ್ದು, ಹೈನುಗಾರರಾಗಿದ್ದು, ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾಗಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…