ಕಡಬ,ಅಲಂಕಾರು: ಎರಡು ತಿಂಗಳ ಬಾಣಂತಿ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಜ.10ರಂದು ಸಂಭವಿಸಿದೆ. ಕಡಬ ತಾಲೂಕು ಆಲಂಕಾರು ಗ್ರಾಮದ ಕಮ್ಮಿತ್ತಿಲು ದಯಾನಂದ ಗೌಡರ ಪತ್ನಿ ಪುಷ್ಪಾವತಿ (34ವ) ಮೃತಪಟ್ಟವರು. ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಇವರು ಬಳಿಕ ಐತ್ತೂರು ಹೊಸಕ್ಲು ತಾಯಿಯ ಮನೆಗೆ ಮೂರು ತಿಂಗಳ ಬಾಣಂತಿ ಆರೈಕೆಗೆ ಹೋಗಿದ್ದು ತಾಯಿ ಮಗು ಆರೋಗ್ಯವಾಗಿದ್ದರು ಎಂದು ಮನೆಯವರು ತಿಳಿಸಿದ್ದಾರೆ.
ಎರಡು ತಿಂಗಳು ಕಳೆದ ನಂತರ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂತಾನ ಹರಣ ಶಸ್ತ್ರ ಚಿಕಿತ್ಸೆಯ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಕಡಬ ಆಸ್ಪತ್ರೆ, ನಂತರ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಜ.10 ರಂದು ಕೊನೆಯುಸಿರೆಳೆದರು.
ಮೃತರು ಪತಿ ದಯಾನಂದ ಗೌಡ, ಪುತ್ರಿಯರಾದ ಎರಡು ತಿಂಗಳ ಹೆಣ್ಣು ಮಗು ಯಶ್ಚಿತಾ, ಗುಣಶ್ರೀ, ಹಂಶಿ, ರಿಷಿಕಾ ರವರನ್ನು ಅಗಲಿದ್ದಾರೆ.
ಈಸಾವಿಗೆ ಮತ್ತು ಮಕ್ಕಳ ಕಣ್ಣೀರಿಗೆ ಯಾರು ಹೊಣೆ: ಮೃತರ ಅಂತ್ಯ ಸಂಸ್ಕಾರದ ವೇಳೆ ನೆರೆದಿದ್ದವರ ಆಕ್ರಂದನ ಮುಗಿಲು ಮುಟ್ಟಿತ್ತು. ಎರಡು ತಿಂಗಳ ಹಸುಗೂಸು ಹಾಗು ಮೂರು ಹೆಣ್ಣುಮಕ್ಕಳ ಕಣ್ಣೀರಿಗೆ ಕಾರಣರು ಯಾರು? ಎಂದು ನೆರೆದವರು ಪ್ರಶ್ನಿಸುತ್ತಿದ್ದರು. ಮೃತಪಟ್ಟ ಪುಷ್ಪಾವತಿಯವರಿಗೆ ಆರೋಗ್ಯದ ಸಮಸ್ಯೆ ಇತ್ತೇ ಎಂದು ಮುಂದಿನ ತನಿಖೆಯಲ್ಲಿ ಮ ಗೊತ್ತಾಗಬೇಕಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಮೃತ ಪುಷ್ಪಾವತಿ ಅವರು ಕೃಷಿಕರಾಗಿದ್ದು, ಹೈನುಗಾರರಾಗಿದ್ದು, ಆಲಂಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯರಾಗಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…