ಕರಾವಳಿ

1500ಕ್ಕೂ ಅಧಿಕ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿದ ವಿಶಿಷ್ಟ ಸಾಧಕ ಪರೋಪಕಾರಿ, ಕಾರ್ಪೊರೇಟರ್ ಗಣೇಶ್ ಕುಲಾಲ್ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಯ ಕಾರ್ಪೊರೇಟರ್ ಆಗಿ ಕಾರ್ಯನಿರ್ವಹಿಸುವುದರ ಜತೆಗೆ ಅನಾಥ ಶವಗಳ ಅಂತ್ಯ ಸಂಸ್ಕಾರ ಸೇವೆಯಲ್ಲಿತೊಡಗಿಸಿಕೊಂಡಿರುವ ಗಣೇಶ ಕುಲಾಲ್ ಅವರು 2024-25ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿವೆ. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ನೇತೃತ್ವದ ಆಯ್ಕೆ ಸಮಿತಿಯು ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಜ. 26ರಂದು ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಗಣೇಶ ಕುಲಾಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರೆಸ್ ಕ್ಲಬ್ ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

ಗಣೇಶ್ ಕುಲಾಲ್ ಅವರು ವಾರೀಸುದಾರರು ಇಲ್ಲದ ಅನಾಥ ಶವಗಳಿಗೆ ಗೌರವಯುತವಾಗಿ ಅಂತ್ಯಕ್ರಿಯೆ ನೆರವೇರಿಸುವ ಮಾನವೀಯ ಕಾರ್ಯದಲ್ಲಿ 25 ವರ್ಷಗಳಿಂದ ತನ್ನನ್ನು ಸಮರ್ಪಿಸಿಕೊಂಡಿದ್ದಾರೆ. ಬಡವರು, ಶ್ರೀಮಂತರು, ಅನಾಥರು ಎಂಬ ಭೇದವಿಲ್ಲದೆ ಇದುವರೆಗೆ 1500ಕ್ಕೂ ಅಧಿಕ ಮೃತದೇಹಗಳಿಗೆ ಅಂತ್ಯ ಸಂಸ್ಕಾರ ನೆರವೇರಿಸಿದ ಸಾಧನೆ ಇವರದ್ದು. ಇವರು ಈ ಸೇವೆಗಾಗಿ ಯಾರಿಂದಲೂ ಏನನ್ನು ಪಡೆಯುವುದಿಲ್ಲ. ಮಂಗಳೂರು ನಗರದಲ್ಲಿ ಯಾರೇ ಆಗಲಿ ಶವದ ಅಂತ್ಯ ಸಂಸ್ಕಾರ ನೆರವೇರಿಸಲು ಕರೆದರೆ ಅಲ್ಲಿ ಗಣೇಶ್ ಕುಲಾಲ್ ಹಾಜರು. ವೆನ್ ಲಾಕ್ ಆಸ್ಪತ್ರೆಯಲ್ಲಿ ವಿಲೇವಾರಿಯಾಗದ ಅನಾಥ ಶವಗಳನ್ನು ಇವರು ಸ್ಮಶಾನಕ್ಕೆ ಸಾಗಿಸಿ ಅಂತ್ಯಕ್ರಿಯೆ ನೆರವೇರಿಸುತ್ತಾರೆ. ಈ ಸೇವೆಯನ್ನು ದೇವರ ಸೇವೆ ಎಂದು ನಂಬಿದವರು. ಅವರು ಜಾತಿ, ಪಕ್ಷ ಭೇದವನ್ನು ಎಣಿಸದೆ, ನಿಸ್ವಾರ್ಥ ಸೇವೆಯ ಮೂಲಕ ಆನಾಥ ಬಂಧು ಎನಿಸಿಕೊಂಡಿದ್ದಾರೆ.

ತಂದೆಯೇ ಪ್ರೇರಣೆ: ತಂದೆ ಮೃತದೇಹಗಳ ಅಂತ್ಯಕ್ರಿಯೆ ಮಾಡುತ್ತಿದ್ದರು. ಅವರ ಸೇವೆಗೆ ಕೈಜೋಡಿಸಲು ಚಿಕ್ಕಂದಿನಲ್ಲಿ ಹೋಗುತ್ತಿದ್ದೆ. ಮಂದೆ ವಿಧಿವಿಧಾನವನ್ನು ಕಲಿತು,ಅದನ್ನು ಮುಂದುವರಿಸಿಕೊಂಡು ಬಂದಿದ್ದೇನೆ. 30ರ ಹರೆಯಲ್ಲಿ ಈ ಸೇವೆಗೆ ಇಳಿದೆ.ಆರಂಭದಲ್ಲಿ ಮನೆಯಲ್ಲಿ ವಿರೋಧ ಕಂಡು ಬಂದಿತ್ತು. ಆದರೆ ತಾಯಿ ನನಗೆ ಪೂರ್ಣ ಬೆಂಬಲ ನೀಡಿದರು ಎನ್ನುತ್ತಾರೆ ಗಣೇಶ್ ಕುಲಾಲ್.

ಗಣೇಶ್ ಕುಲಾಲ್ ಅವರು ಶವಗಳ ವಿಲೇವಾರಿ ಮಾತ್ರವಲ್ಲ, ಕಾಯಿಲೆ ಬಿದ್ದವರನ್ನು ಆಸ್ಪತ್ರೆ ಗಳಿಗೆ ಸಾಗಿಸಿ ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸುವ ಕಾರ್ಯವನ್ನು ಮಾಡುತ್ತಾರೆ. ಕೊರೋನ ಸಮಯದಲ್ಲಿ 150ಕ್ಕೂ ಅಧಿಕ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಕೊರೋನದಿಂದ ಮೃತಪಟ್ಟ ಶವಗಳನ್ನು ಆಸ್ಪತ್ರೆಗಳಿಂದ ಬೋಳಾರ ಮತ್ತು ನಂದಿಗುಡ್ಡೆಯ ಸ್ಮಶಾನಗಳಿಗೆ ಸಾಗಿಸಿ ಅಂತ್ಯಕ್ರಿಯೆ ನೆರವೇರಿಸಿದ್ದರು. ಆ ಸಮಯದಲ್ಲಿ ಜೀವದ ಹಂಗು ತೊರೆದು ಸೇವೆ ಸಲ್ಲಿಸಿದ್ದರು. ಲಾಕ್ ಡೌನ್ ನಿಂದ ತೊಂದರೆಗೊಳಗಾದ ದೂರದ ಊರಿನ ಕಾರ್ಮಿಕರಿಗೆ, ಬಡವರಿಗೆ ಆಹಾರದ ವ್ಯವಸ್ಥೆ, ಕಿಟ್ ವ್ಯವಸ್ಥೆ ಒದಗಿಸಿದ್ದರು. ನಿರಾಶ್ರಿತರ ಶಿಬಿರ ಆರಂಭಿಸಿ ಸುಮಾರು 30 ಮಂದಿಗೆ ಮೂರು ಹೊತ್ತು ಆಹಾರದ ವ್ಯವಸ್ಥೆಯನ್ನು ಹಲವು ತಿಂಗಳುಗಳ ನೀಡಿದ್ದರು.

55 ಹರೆಯದ ಗಣೇಶ್ ಕುಲಾಲ್ ಆರ್ಥಿಕವಾಗಿ ಸ್ಥಿತಿವಂತರಲ್ಲ. 8ನೇ ತರಗತಿ ಶಿಕ್ಷಣ ಪಡೆದಿದ್ದಾರೆ. ಚಿಕ್ಕಂದಿನಲ್ಲಿ ಕೆಂಪು ಕಲ್ಲು ಹೊರುವ ಕೆಲಸದ ಮೂಲಕ ದುಡಿಯಲು ಆರಂಭಿಸಿದೆ. ಒಂದು ಕಲ್ಲಿಗೆ 50 ಪೈಸೆಯಿಂದ ಒಂದು ರೂಪಾಯಿ ಸಿಗುತ್ತಿತ್ತು. ಅದೇ ದುಡಿಮೆಯಿಂದ ಬಂದ ಆದಾಯವನ್ನು ಕೂಡಿಟ್ಟು ರಿಕ್ಷಾ ಖರೀದಿಸಿದರು.ಅದೇ ರಿಕ್ಷಾದಲ್ಲಿ ಚಾಲಕ ರಾಗಿ 10 ವರ್ಷಗಳ ಕಾಲ ದುಡಿದು , ಬಳಿಕ ಮಿನಿ ಟೆಂಪೋ ಖರೀದಿಸಿದರು. ಅದರಲ್ಲಿ ಚಾಲಕರಾಗಿ ದುಡಿಯುತ್ತಾ , ಸಣ್ಣ ಕಾರ್ಯಕ್ರಮಗಳಿಗೆ ಬಾಡಿಗೆಗೆ ಶಾಮಿಯಾನ ನೀಡುವ ಬ್ಯುಸಿನೆಸ್ ಆರಂಭಿಸಿದ್ದರು. 2019ರಲ್ಲಿ ರಾಜಕೀಯ ಪ್ರವೇಶಿಸಿ ಮನಪಾ ಸದಸ್ಯರಾದ ಬಳಿಕ ಇವರಿಗೆ ಜವಾಬ್ದಾರಿ ಜಾಸ್ತಿಯಾಗಿ ಶಾಮಿಯಾನ ಮತ್ತು ಚೆಯರ್ ಬಾಡಿಗೆಗೆ ನೀಡುವ ಇವರ ಅಂಗಡಿ ಬಂದ್ ಆಯಿತು.ಈಗ ಅವರ ಬಳಿ
15 ವರ್ಷಗಳಷ್ಟು ಹಳೆಯ ಒಂದು ಸಣ್ಣ ಟೆಂಪೋ ಇದೆ. ಗಣೇಶ್ ಕುಲಾಲ್ ಅವರ ಸಮಾಜ ಸೇವೆಗೆ ಪತ್ನಿ, ಪುತ್ರ ಪ್ರೋತ್ಸಾಹ ನೀಡುತ್ತಿದ್ದಾರೆ.

ಸ್ವಂತ ಮನೆಯಿಲ್ಲ: ಗಣೇಶ್ ಕುಲಾಲ್ ಅವರಿಗೆ ಸ್ವಂತ ಮನೆಯಿಲ್ಲ. ಹೆತ್ತವರು ಉರ್ವ ಮಾರಿಗುಡಿ ದೇವಸ್ಥಾನದ ಚಾಕರಿ ಮಾಡಿಕೊಂಡು ಇದ್ದವರು. ದೇವಸ್ಥಾನದ ಚಾಕರಿ ಮಾಡುವವರಿಗೆ ದೇವಸ್ಥಾನದ ವತಿಯಿಂದ ಮನೆ ನೀಡಲಾಗುತ್ತದೆ. ಅದೇ ಮನೆಯಲ್ಲಿ ಇವರು ಹುಟ್ಟಿ ಬೆಳೆದವರು. ಸ್ವಂತ ಮನೆ ಮಾಡುವ ಕಡೆಗೆ ಗಮನ ಹರಿಸಿದವರಲ್ಲ. ಕಾಯಕದಲ್ಲಿ ಸಂತೃಪ್ತ ಜೀವನ ನಡೆಸುತ್ತಿದ್ದಾರೆ. “ಅಮ್ಮ(ಮಾರಿಯಮ್ಮ)ನನ್ನು ಬಿಟ್ಟು ಬೇರೆ ಕಡೆಗೆ ಹೋಗಲು ಮನಸ್ಸು ಒಪ್ಪುತ್ತಿಲ್ಲ” ಎಂದು ಹೇಳುವ ದೇವರ ಬಗ್ಗೆ ಅಚಲ ವಿಶ್ವಾಸವಿಟ್ಟು ತನ್ನ ಕಾಯಕವನ್ನು ಮುಂದುವರಿಸಿದ್ದಾರೆ ಗಣೇಶ ಕುಲಾಲ್.

ಗಣೇಶ್ ಕುಮಾಲ್ ನಿರ್ಗತಿಕರಿಗೆ ಮನೆ ಕಟ್ಟಿಕೊಡುವಲ್ಲಿ ಶ್ರಮಿಸಿದ್ದಾರೆ. ತಾಯಿ ಮತ್ತು ಮಗಳು ಮಾತ್ರ ಇರುವ ನಿರ್ಗತಿಕ ಕುಟುಂಬವೊಂದಕ್ಕೆ ಗಣೇಶ್ ಕುಲಾಲ್ ಅವರು ಸ್ಥಳೀಯ ಸ್ಥಳೀಯ ದಾನಿಗಳ ನೆರವಿನಲ್ಲಿ 7 ಲಕ್ಷ ರೂ.ವೆಚ್ಚದಲ್ಲಿ ಉರ್ವದಲ್ಲಿ ಮನೆ(ಅಟಲ್ ನಿಲಯ) ನಿರ್ಮಿಸಿ ಕೊಟ್ಟಿದ್ದಾರೆ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…

1 day ago

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…

1 day ago

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…

1 day ago

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

2 days ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

2 days ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

2 days ago