ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದಯ ಲಕ್ಷ ದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಪರಾರಿಯಾದ ಘಟನೆ ಹಾಡಹಗಲೇ ನಡೆದಿದೆ.
ಸ್ಥಳಕ್ಕೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿ ಶೀಘ್ರವೇ ದರೋಡೆಕೋರರನ್ನು ಬಂಧಿಸುವಂತೆ ಪೊಲೀಸರಿಗೆ ನಿರ್ದೇಶಿಸಿದ್ದಾರೆ.
ಬ್ಯಾಂಕಿನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿ ಹಾಗೂ ಓರ್ವ ಪುರುಷ ಸಿಬ್ಬಂದಿ ಮತ್ತೋರ್ವ ಸಿಸಿಟಿವಿ ಟೆಕ್ನೀಷಿಯನ್ ಅವರಿಗೆ ಬಂದೂಕು ಹಾಗೂ ತಲವಾರು ತೋರಿಸಿದ ಮಾಸ್ಕ್ ಧರಿಸಿದ್ದ ಐವರ ತಂಡ ಸುಮ್ಮನಿರುವಂತೆ ಬೆದರಿಸಿ, ಇಲ್ಲವಾದಲ್ಲಿ ಕೊಲ್ಲುವ ಬೆದರಿಕೆಯನ್ನು ಒಡ್ಡಿ ಲಾಕರ್ ನಲ್ಲಿದ್ದ 15 ಕೋಟಿ ರೂ. ಚಿನ್ನ ಹಾಗೂ 5 ಲಕ್ಷ ರೂ ನಷ್ಟು ನಗದು ದೋಚಿ ಗ್ರೇ ಬಣ್ಣದ ಫಿಯೇಟ್ ಕಾರಿನಲ್ಲಿ ಪರಾರಿಯಾಗಿದ್ದಾರೆ. ಸದಾ ಜನಜಂಗುಳಿಯಿಂದ ಕೂಡಿರುವ ಕೆ.ಸಿ ರೋಡ್ ಜಂಕ್ಷನ್ ಶುಕ್ರವಾರ ವಾದ ಹಿನ್ನೆಲೆಯಲ್ಲಿ ಹೆಚ್ಚು ಜನರಿರಲಿಲ್ಲ.
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…