ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಕ್ಷೇತ್ರದಲ್ಲಿ 5.27 ಕೋ.ರೂ.ಗಳಲ್ಲಿ ಬಹಳ ಬೇಡಿಕೆ ಇರುವ ಮೂರು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ; ಸಂಸದ ಕ್ಯಾ| ಬ್ರಿಜೇಶ್ ಚೌಟ

ಬಂಟ್ವಾಳ: ಸಿಆರ್‌ಎಫ್ ನಿಧಿಯಿಂದ ದ.ಕ.ಲೋಕಸಭಾ ಕ್ಷೇತ್ರಕ್ಕೆ 42 ಕೋ.ರೂ. ಅನುದಾನ ಬಂದಿದ್ದು, ಅದರಲ್ಲಿ 6 ಕೋ.ರೂ.ಗಳನ್ನು ಬಂಟ್ವಾಳ ತಾಲೂಕಿಗೆ ನೀಡಲಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ 5.27 ಕೋ.ರೂ.ಗಳಲ್ಲಿ ಬಹಳ ಬೇಡಿಕೆ ಇರುವ ಮೂರು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದರು.

 


ಅವರು ಸಿಆರ್‌ಐಎಫ್ ನಿಧಿಯಿಂದ ಬಂಟ್ವಾಳದ ಮೂರು ರಸ್ತೆಗಳಿಗೆ ಸಾಲೆತ್ತೂರು, ಕಲ್ಲಡ್ಕ ಹಾಗೂ ಪಚ್ಚಿನಡ್ಕದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ ಪೊಳಲಿ-ಪಚ್ಚಿನಡ್ಕ ರಸ್ತೆಯ 3.33 ಕಿ.ಮೀ.ಗೆ 2 ಕೋ.ರೂ, ಕಲ್ಲಡ್ಕ-ವೀರಕಂಭ ರಸ್ತೆಯ 2.25 ಕಿ.ಮೀ.ಗೆ 1.35 ಕೋ.ರೂ. ಹಾಗೂ ಸಾಲೆತ್ತೂರು-ಕಟ್ಟತ್ತಿಲ ರಸ್ತೆಯ 3.2 ಕಿ.ಮೀ.ಗೆ 1.32 ಕೋ.ರೂ.ಗಳಲ್ಲಿ ಕಾಮಗಾರಿ ನಡೆಯಲಿದೆ. ಸಿಆರ್‌ಎಫ್‌ನಿಂದ ಮುಂದೆ ಇನ್ನೂ ಹೆಚ್ಚಿನ ಅನುದಾನಕ್ಕೆ ಮನವಿ ನೀಡಲಾಗಿದ್ದು, ಹೆಚ್ಚಿನ ಪ್ರಸ್ತಾವನೆ ನೀಡಿದರೆ ಅನುದಾನ ಭರವಸೆ ನೀಡಿದ್ದಾರೆ. ರಾಜ್ಯ ಸರಕಾರವು ಯಾವುದೇ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗವನ್ನು ನೀಡಲಾಗಿದೆ ಎಂದರು.

ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ರಸ್ತೆ ಕಾಮಗಾರಿಗಳಿಗೆ ಅನುದಾನ ನೀಡುವುದು ಶಾಸಕರು, ಸಂಸದರ ಜವಾಬ್ದಾರಿಯಾದರೂ ಕಾಮಗಾರಿ ಸರಿಯಾಗಿ ನಡೆದಿದೆಯೇ ಎಂದು ಸ್ಥಳೀಯರು ಗಮನಹರಿಸಬೇಕು. ಎಂಜಿನಿಯರ್‌ಗಳು ಕೂಡ ಎಚ್ಚರಿಕೆ ವಹಿಸಿ ಗುತ್ತಿಗೆದಾರರು ಸಮರ್ಪಕವಾಗಿ ಕಾಮಗಾರತಿ ನಿರ್ವಹಿಸುವ ಕುರಿತು ನೋಡಿಕೊಳ್ಳಬೇಕು ಎಂದರು.
ವಿವಿಧ ಕಡೆಯ ಶಿಲಾನ್ಯಾಸ ಸಮಾರಂಭದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಉಪಾಧ್ಯಕ್ಷರಾದ ಪುಷ್ಪರಾಜ್ ಚೌಟ, ರವೀಶ್ ಶೆಟ್ಟಿ ಕರ್ಕಳ, ಸಹಕಾರಿ ಪ್ರಕೋಷ್ಠದ ಅಧ್ಯಕ್ಷ ಜಯರಾಮ ರೈ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಒಬಿಸಿ ಮೋರ್ಚಾದ ಜಿಲ್ಲಾ ಮುಂದಾಳು ಮೋನಪ್ಪ ದೇವಸ್ಯ, ರಾಜ್ಯ ವಕ್ತಾರ ವಿಕಾಸ್ ಪುತ್ತೂರು, ತಾ.ಪಂ.ಮಾಜಿ ಸದಸ್ಯ ಯಶವಂತ ಪೊಳಲಿ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯಕುಮಾರ್, ಶುಭ ಸಮೂಹದ ಮಾಲಕ ಭುವನೇಶ್ ಪಚ್ಚಿನಡ್ಕ, ಎಂಜಿನಿಯರ್ ಜೀತೇಂದ್ರ ಉಪಸ್ಥಿತರಿದ್ದರು.

ಮಾಧವ ಮಾವೆ ಸ್ವಾಗತಿಸಿದರು. ಶಶಿಧರ ರೈ ವಂದಿಸಿದರು. ರಾಜಾರಾಮ್ ಹೆಗ್ಡೆ, ಜಿನೇಂದ್ರ ಕೋಟ್ಯಾನ್, ಶೇಖರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!