ಬಂಟ್ವಾಳ: ಸಿಆರ್ಎಫ್ ನಿಧಿಯಿಂದ ದ.ಕ.ಲೋಕಸಭಾ ಕ್ಷೇತ್ರಕ್ಕೆ 42 ಕೋ.ರೂ. ಅನುದಾನ ಬಂದಿದ್ದು, ಅದರಲ್ಲಿ 6 ಕೋ.ರೂ.ಗಳನ್ನು ಬಂಟ್ವಾಳ ತಾಲೂಕಿಗೆ ನೀಡಲಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ 5.27 ಕೋ.ರೂ.ಗಳಲ್ಲಿ ಬಹಳ ಬೇಡಿಕೆ ಇರುವ ಮೂರು ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಹೇಳಿದರು.
ಅವರು ಸಿಆರ್ಐಎಫ್ ನಿಧಿಯಿಂದ ಬಂಟ್ವಾಳದ ಮೂರು ರಸ್ತೆಗಳಿಗೆ ಸಾಲೆತ್ತೂರು, ಕಲ್ಲಡ್ಕ ಹಾಗೂ ಪಚ್ಚಿನಡ್ಕದಲ್ಲಿ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ ಪೊಳಲಿ-ಪಚ್ಚಿನಡ್ಕ ರಸ್ತೆಯ 3.33 ಕಿ.ಮೀ.ಗೆ 2 ಕೋ.ರೂ, ಕಲ್ಲಡ್ಕ-ವೀರಕಂಭ ರಸ್ತೆಯ 2.25 ಕಿ.ಮೀ.ಗೆ 1.35 ಕೋ.ರೂ. ಹಾಗೂ ಸಾಲೆತ್ತೂರು-ಕಟ್ಟತ್ತಿಲ ರಸ್ತೆಯ 3.2 ಕಿ.ಮೀ.ಗೆ 1.32 ಕೋ.ರೂ.ಗಳಲ್ಲಿ ಕಾಮಗಾರಿ ನಡೆಯಲಿದೆ. ಸಿಆರ್ಎಫ್ನಿಂದ ಮುಂದೆ ಇನ್ನೂ ಹೆಚ್ಚಿನ ಅನುದಾನಕ್ಕೆ ಮನವಿ ನೀಡಲಾಗಿದ್ದು, ಹೆಚ್ಚಿನ ಪ್ರಸ್ತಾವನೆ ನೀಡಿದರೆ ಅನುದಾನ ಭರವಸೆ ನೀಡಿದ್ದಾರೆ. ರಾಜ್ಯ ಸರಕಾರವು ಯಾವುದೇ ರಸ್ತೆಗಳ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ವೇಗವನ್ನು ನೀಡಲಾಗಿದೆ ಎಂದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ರಸ್ತೆ ಕಾಮಗಾರಿಗಳಿಗೆ ಅನುದಾನ ನೀಡುವುದು ಶಾಸಕರು, ಸಂಸದರ ಜವಾಬ್ದಾರಿಯಾದರೂ ಕಾಮಗಾರಿ ಸರಿಯಾಗಿ ನಡೆದಿದೆಯೇ ಎಂದು ಸ್ಥಳೀಯರು ಗಮನಹರಿಸಬೇಕು. ಎಂಜಿನಿಯರ್ಗಳು ಕೂಡ ಎಚ್ಚರಿಕೆ ವಹಿಸಿ ಗುತ್ತಿಗೆದಾರರು ಸಮರ್ಪಕವಾಗಿ ಕಾಮಗಾರತಿ ನಿರ್ವಹಿಸುವ ಕುರಿತು ನೋಡಿಕೊಳ್ಳಬೇಕು ಎಂದರು.
ವಿವಿಧ ಕಡೆಯ ಶಿಲಾನ್ಯಾಸ ಸಮಾರಂಭದಲ್ಲಿ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಉಪಾಧ್ಯಕ್ಷರಾದ ಪುಷ್ಪರಾಜ್ ಚೌಟ, ರವೀಶ್ ಶೆಟ್ಟಿ ಕರ್ಕಳ, ಸಹಕಾರಿ ಪ್ರಕೋಷ್ಠದ ಅಧ್ಯಕ್ಷ ಜಯರಾಮ ರೈ, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಒಬಿಸಿ ಮೋರ್ಚಾದ ಜಿಲ್ಲಾ ಮುಂದಾಳು ಮೋನಪ್ಪ ದೇವಸ್ಯ, ರಾಜ್ಯ ವಕ್ತಾರ ವಿಕಾಸ್ ಪುತ್ತೂರು, ತಾ.ಪಂ.ಮಾಜಿ ಸದಸ್ಯ ಯಶವಂತ ಪೊಳಲಿ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷೆ ಪ್ರೇಮಾ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷ ವಿಜಯಕುಮಾರ್, ಶುಭ ಸಮೂಹದ ಮಾಲಕ ಭುವನೇಶ್ ಪಚ್ಚಿನಡ್ಕ, ಎಂಜಿನಿಯರ್ ಜೀತೇಂದ್ರ ಉಪಸ್ಥಿತರಿದ್ದರು.
ಮಾಧವ ಮಾವೆ ಸ್ವಾಗತಿಸಿದರು. ಶಶಿಧರ ರೈ ವಂದಿಸಿದರು. ರಾಜಾರಾಮ್ ಹೆಗ್ಡೆ, ಜಿನೇಂದ್ರ ಕೋಟ್ಯಾನ್, ಶೇಖರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…