ಜನ ಮನದ ನಾಡಿ ಮಿಡಿತ

Advertisement

ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವಾ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ

ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವಾ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು.


ಮೊದಲಿಗೆ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್‌ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.

 


ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ ಶೆಟ್ಟಿ ತಿಂಬರ ಮುಂಬೈ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ನಾರಾಯಣ ಹೆಗ್ಡೆ, ಮುಖ್ಯ ಅತಿಥಿಗಳಾಗಿ ಪಾಲ್ ಪಡೆದರು. ಉದ್ಯಮಿ ಸೀತಾರಾಮ ಶೆಟ್ಟಿ ತಿಂಬರ, ನೀರಜ್ ಶೆಟ್ಟಿ, ಮಂಗಲ್ಪಾಡಿ ಪಂಚಾಯ್ತಿನ ಮಾಜಿ ಸದಸ್ಯರಾದ ವಲ್ಸರಾಜ್, PNR ಪ್ರೊಡಕ್ಷನ್‌ನ ರಾಘವೇಂದ್ರ ಹೊಳ್ಳ ತಿಂಬರ ಹಾಗೂ ಇತರರು ಉಪಸ್ಥಿತರಿದ್ದರು.
ನಿರ್ದೇಶಕರಾದ ರೋಷನ್ ಆರ್ ಆಳ್ವ ತಿಂಬರ, ಛಾಯಾಗ್ರಾಹಕರಾದ ಅರುಣ್ ರೈ ಪುತ್ತೂರು, ನಾಯಕ ನಟ ನವೀನ್, ನಾಯಕಿ ಅಮೃತ ಹಾಗೂ ಇತರ ಕಲಾವಿದರು ಹಾಗೂ ತಂತ್ರಜ್ಞರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಹರ್ಷರಾಜ್ ನಾವೂರು ಕಾರ್ಯಕ್ರಮವನ್ನು ನಿರೂಪಿಸಿದರು. ಚಿತ್ರದಲ್ಲಿ ಖ್ಯಾತ ಕಲಾವಿದರಾದ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡು, ಪುಷ್ಪರಾಜ್ ಬೊಳ್ಳಾರ್ ಸೇರಿದಂತೆ ಹಲವು ತುಳು ಮತ್ತು ಕನ್ನಡ ಚಲನಚಿತ್ರ ತಾರೆಯರು ಬಣ್ಣ ಹಚ್ಚಲಿದ್ದಾರೆ ಎಂದು ಚಿತ್ರದ ನಿರ್ದೇಶಕ ರೋಶನ್ ಆರ್ ಆಳ್ವ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

error: Content is protected !!