ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವಾ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು.
ಮೊದಲಿಗೆ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ ಶೆಟ್ಟಿ ತಿಂಬರ ಮುಂಬೈ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ನಾರಾಯಣ ಹೆಗ್ಡೆ, ಮುಖ್ಯ ಅತಿಥಿಗಳಾಗಿ ಪಾಲ್ ಪಡೆದರು. ಉದ್ಯಮಿ ಸೀತಾರಾಮ ಶೆಟ್ಟಿ ತಿಂಬರ, ನೀರಜ್ ಶೆಟ್ಟಿ, ಮಂಗಲ್ಪಾಡಿ ಪಂಚಾಯ್ತಿನ ಮಾಜಿ ಸದಸ್ಯರಾದ ವಲ್ಸರಾಜ್, PNR ಪ್ರೊಡಕ್ಷನ್ನ ರಾಘವೇಂದ್ರ ಹೊಳ್ಳ ತಿಂಬರ ಹಾಗೂ ಇತರರು ಉಪಸ್ಥಿತರಿದ್ದರು.
ನಿರ್ದೇಶಕರಾದ ರೋಷನ್ ಆರ್ ಆಳ್ವ ತಿಂಬರ, ಛಾಯಾಗ್ರಾಹಕರಾದ ಅರುಣ್ ರೈ ಪುತ್ತೂರು, ನಾಯಕ ನಟ ನವೀನ್, ನಾಯಕಿ ಅಮೃತ ಹಾಗೂ ಇತರ ಕಲಾವಿದರು ಹಾಗೂ ತಂತ್ರಜ್ಞರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಹರ್ಷರಾಜ್ ನಾವೂರು ಕಾರ್ಯಕ್ರಮವನ್ನು ನಿರೂಪಿಸಿದರು. ಚಿತ್ರದಲ್ಲಿ ಖ್ಯಾತ ಕಲಾವಿದರಾದ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡು, ಪುಷ್ಪರಾಜ್ ಬೊಳ್ಳಾರ್ ಸೇರಿದಂತೆ ಹಲವು ತುಳು ಮತ್ತು ಕನ್ನಡ ಚಲನಚಿತ್ರ ತಾರೆಯರು ಬಣ್ಣ ಹಚ್ಚಲಿದ್ದಾರೆ ಎಂದು ಚಿತ್ರದ ನಿರ್ದೇಶಕ ರೋಶನ್ ಆರ್ ಆಳ್ವ ಮಾಹಿತಿ ನೀಡಿದರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…