ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವಾ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು.
ಮೊದಲಿಗೆ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ ಶೆಟ್ಟಿ ತಿಂಬರ ಮುಂಬೈ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ನಾರಾಯಣ ಹೆಗ್ಡೆ, ಮುಖ್ಯ ಅತಿಥಿಗಳಾಗಿ ಪಾಲ್ ಪಡೆದರು. ಉದ್ಯಮಿ ಸೀತಾರಾಮ ಶೆಟ್ಟಿ ತಿಂಬರ, ನೀರಜ್ ಶೆಟ್ಟಿ, ಮಂಗಲ್ಪಾಡಿ ಪಂಚಾಯ್ತಿನ ಮಾಜಿ ಸದಸ್ಯರಾದ ವಲ್ಸರಾಜ್, PNR ಪ್ರೊಡಕ್ಷನ್ನ ರಾಘವೇಂದ್ರ ಹೊಳ್ಳ ತಿಂಬರ ಹಾಗೂ ಇತರರು ಉಪಸ್ಥಿತರಿದ್ದರು.
ನಿರ್ದೇಶಕರಾದ ರೋಷನ್ ಆರ್ ಆಳ್ವ ತಿಂಬರ, ಛಾಯಾಗ್ರಾಹಕರಾದ ಅರುಣ್ ರೈ ಪುತ್ತೂರು, ನಾಯಕ ನಟ ನವೀನ್, ನಾಯಕಿ ಅಮೃತ ಹಾಗೂ ಇತರ ಕಲಾವಿದರು ಹಾಗೂ ತಂತ್ರಜ್ಞರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಹರ್ಷರಾಜ್ ನಾವೂರು ಕಾರ್ಯಕ್ರಮವನ್ನು ನಿರೂಪಿಸಿದರು. ಚಿತ್ರದಲ್ಲಿ ಖ್ಯಾತ ಕಲಾವಿದರಾದ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡು, ಪುಷ್ಪರಾಜ್ ಬೊಳ್ಳಾರ್ ಸೇರಿದಂತೆ ಹಲವು ತುಳು ಮತ್ತು ಕನ್ನಡ ಚಲನಚಿತ್ರ ತಾರೆಯರು ಬಣ್ಣ ಹಚ್ಚಲಿದ್ದಾರೆ ಎಂದು ಚಿತ್ರದ ನಿರ್ದೇಶಕ ರೋಶನ್ ಆರ್ ಆಳ್ವ ಮಾಹಿತಿ ನೀಡಿದರು.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…