ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವಾ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು.
ಮೊದಲಿಗೆ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ ಶೆಟ್ಟಿ ತಿಂಬರ ಮುಂಬೈ, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ನಾರಾಯಣ ಹೆಗ್ಡೆ, ಮುಖ್ಯ ಅತಿಥಿಗಳಾಗಿ ಪಾಲ್ ಪಡೆದರು. ಉದ್ಯಮಿ ಸೀತಾರಾಮ ಶೆಟ್ಟಿ ತಿಂಬರ, ನೀರಜ್ ಶೆಟ್ಟಿ, ಮಂಗಲ್ಪಾಡಿ ಪಂಚಾಯ್ತಿನ ಮಾಜಿ ಸದಸ್ಯರಾದ ವಲ್ಸರಾಜ್, PNR ಪ್ರೊಡಕ್ಷನ್ನ ರಾಘವೇಂದ್ರ ಹೊಳ್ಳ ತಿಂಬರ ಹಾಗೂ ಇತರರು ಉಪಸ್ಥಿತರಿದ್ದರು.
ನಿರ್ದೇಶಕರಾದ ರೋಷನ್ ಆರ್ ಆಳ್ವ ತಿಂಬರ, ಛಾಯಾಗ್ರಾಹಕರಾದ ಅರುಣ್ ರೈ ಪುತ್ತೂರು, ನಾಯಕ ನಟ ನವೀನ್, ನಾಯಕಿ ಅಮೃತ ಹಾಗೂ ಇತರ ಕಲಾವಿದರು ಹಾಗೂ ತಂತ್ರಜ್ಞರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಹರ್ಷರಾಜ್ ನಾವೂರು ಕಾರ್ಯಕ್ರಮವನ್ನು ನಿರೂಪಿಸಿದರು. ಚಿತ್ರದಲ್ಲಿ ಖ್ಯಾತ ಕಲಾವಿದರಾದ ದೀಪಕ್ ರೈ ಪಾಣಾಜೆ, ಪ್ರಕಾಶ್ ತೂಮಿನಾಡು, ಪುಷ್ಪರಾಜ್ ಬೊಳ್ಳಾರ್ ಸೇರಿದಂತೆ ಹಲವು ತುಳು ಮತ್ತು ಕನ್ನಡ ಚಲನಚಿತ್ರ ತಾರೆಯರು ಬಣ್ಣ ಹಚ್ಚಲಿದ್ದಾರೆ ಎಂದು ಚಿತ್ರದ ನಿರ್ದೇಶಕ ರೋಶನ್ ಆರ್ ಆಳ್ವ ಮಾಹಿತಿ ನೀಡಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…