ಹಳೆಯಂಗಡಿ: ಯಕ್ಷನಾಟ್ಯ ದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು.
ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷ, ಹರಿದಾಸ್ ಭಟ್, ಸದಾಶಿವ ಡಿ ಶೆಟ್ಟಿಗಾರ್, ಸೀತಾ ಪೂಜಾರಿ,ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ , ಭಾಸ್ಕರ್ ಅಮೀನ್ ತೋಕೂರು,ಗಣೇಶ್ ಪೂಜಾರಿ ಬೆಂಗಳೂರು, ಮತ್ತಿತರರು ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಎಡ್ಮೇಮಾರ್ ನಿರೂಪಿಸಿದರು.
ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ ಮತ್ತು ದೃಶಾನ್ ರವರನ್ನು ಗೌರವಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಯ ನಾಟ್ಯಭ್ಯಾಸ ಗುರುಗಳಾದ ಯಕ್ಷಮಯೂರ ಶೇಖರ್ ಡಿ ಶೆಟ್ಟಿಗಾರ್ ಮತ್ತು ನಾಟ್ಯಗುರು ಶರತ್ ಕುಡ್ಲ ಶುಭ ಹಾರೈಸಿದರು.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…