ಹಳೆಯಂಗಡಿ: ಯಕ್ಷನಾಟ್ಯ ದಿಂದಲೂ ದೇವರ ಸೇವೆ ಮಾಡಿದಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಯಕ್ಷಗಾನ ಸಹಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಡಿಸಿಕೊಂಡರೆ ಜೀವನದಲ್ಲಿ ಸಂಸ್ಕಾರ ಸಂಸ್ಕೃತಿ ಸಾಧ್ಯ ಎಂದು ಕಟೀಲು ಕ್ಷೇತ್ರದ ಅರ್ಚಕ ಶ್ರೀ ಹರಿ ನಾರಾಯಣ ಆಸ್ರಣ್ಣ ಹೇಳಿದರು.
ಅವರು ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಕ್ಷಾರ್ಚನೆ ಕಾರ್ಯಕ್ರಮದ ದೀಪ ಪ್ರಜ್ವಲನಗೊಳಿಸಿ ಆಶೀರ್ವಚನ ನೀಡಿದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಭಾಗವತರಾದ ರವಿಚಂದ್ರ ಕನ್ನಡಿಕಟ್ಟೆ,ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವ್ಥಾಪನಾ ಸಮಿತಿಯ ಅಧ್ಯಕ್ಷ, ಹರಿದಾಸ್ ಭಟ್, ಸದಾಶಿವ ಡಿ ಶೆಟ್ಟಿಗಾರ್, ಸೀತಾ ಪೂಜಾರಿ,ಅಂಬಿಕಾ ಕಿರಣ್ ಸಿದ್ದು ಪೂಜಾರಿ ದುಬೈ , ಭಾಸ್ಕರ್ ಅಮೀನ್ ತೋಕೂರು,ಗಣೇಶ್ ಪೂಜಾರಿ ಬೆಂಗಳೂರು, ಮತ್ತಿತರರು ಉಪಸ್ಥಿತರಿದ್ದರು. ನವೀನ್ ಶೆಟ್ಟಿ ಎಡ್ಮೇಮಾರ್ ನಿರೂಪಿಸಿದರು.
ಯಕ್ಷಾರ್ಚನೆಯ ಬಾಲ ಪ್ರತಿಭೆಗಳಾದ ದಿಯಾ, ದಿಶಾ ಮತ್ತು ದೃಶಾನ್ ರವರನ್ನು ಗೌರವಿಸಲಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಯ ನಾಟ್ಯಭ್ಯಾಸ ಗುರುಗಳಾದ ಯಕ್ಷಮಯೂರ ಶೇಖರ್ ಡಿ ಶೆಟ್ಟಿಗಾರ್ ಮತ್ತು ನಾಟ್ಯಗುರು ಶರತ್ ಕುಡ್ಲ ಶುಭ ಹಾರೈಸಿದರು.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…