ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ 28ನೇ ವಾರ್ಡಿನ ಉರ್ವ ಮಾರ್ಕೆಟ್ ಹತ್ತಿರದ ನಾರಾಯಣ ಗುರು ಮಂದಿರದ ಬಳಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಪ್ರವಾಸಿ ಕಾರು ತಂಗುದಾಣದ ಮೇಲ್ಛಾವಣಿಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಪ್ರವಾಸಿ ಕಾರು ಚಾಲುಕರದ್ದು ನಿರಂತರ ಪಯಣದ ಬದುಕು. ತಮ್ಮ ಬಳಿ ಬಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಊರು-ಮನೆ ತಲುಪಿಸುವುದೇ ಅವರ ಜವಾಬ್ದಾರಿಯುತ ಕಾಯಕ. ದಿನನಿತ್ಯದ ಬಹುಪಾಲು ಮನೆಯಿಂದ ಹೊರಗೆಯೇ ಕಳೆಯುವ ಅವರುಗಳಿಗೆ ಬಿಡುವಿನ ವೇಳೆಯಲ್ಲಿ ದಣಿವಾರಿಸಿಕೊಳ್ಳಲು ಇಂತಹ ಸುಸಜ್ಜಿತ ತಂಗುದಾಣಗಳಿದ್ದರೆ ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯರುಗಳಾದ ಸಂಧ್ಯಾ ಆಚಾರ್ಯ, ಗಣೇಶ್ ಕುಲಾಲ್, ಪೂರ್ಣಿಮಾ, ಮತ್ತು ಮೋಹನ್ ಪೂಜಾರಿ, ರಾಧಾಕೃಷ್ಣ, ಮೋಹನ್ ಆಚಾರ್, ಶೇಖರ್, ಜಿತೇಶ್, ಗಣೇಶ್ ಸಾಲ್ಯಾನ್, ಮನೋಹರ್, ಹರೀಶ್, ರಾಜೇಶ್, ಆನಂದ ರೈ, ಪ್ರೀತಮ್, ಪ್ರಕಾಶ್, ರಘುನಾಥ ಪ್ರಭು, ಗುರು ಚರಣ್, ವಿಶು ಕುಮಾರ್, ಪ್ರಜೀತ್, ಕಿಶೋರ್, ಪ್ರಸಾದ್, ಮುರಳಿ, ಸೇರಿದಂತೆ ಅನೇಕ ಉಪಸ್ಥಿತರಿದ್ದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…