ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ 28ನೇ ವಾರ್ಡಿನ ಉರ್ವ ಮಾರ್ಕೆಟ್ ಹತ್ತಿರದ ನಾರಾಯಣ ಗುರು ಮಂದಿರದ ಬಳಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾದ ಪ್ರವಾಸಿ ಕಾರು ತಂಗುದಾಣದ ಮೇಲ್ಛಾವಣಿಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು.
ನಂತರ ಅವರು ಮಾತನಾಡಿ, ಪ್ರವಾಸಿ ಕಾರು ಚಾಲುಕರದ್ದು ನಿರಂತರ ಪಯಣದ ಬದುಕು. ತಮ್ಮ ಬಳಿ ಬಂದ ಪ್ರಯಾಣಿಕರನ್ನು ಸುರಕ್ಷಿತವಾಗಿ ಊರು-ಮನೆ ತಲುಪಿಸುವುದೇ ಅವರ ಜವಾಬ್ದಾರಿಯುತ ಕಾಯಕ. ದಿನನಿತ್ಯದ ಬಹುಪಾಲು ಮನೆಯಿಂದ ಹೊರಗೆಯೇ ಕಳೆಯುವ ಅವರುಗಳಿಗೆ ಬಿಡುವಿನ ವೇಳೆಯಲ್ಲಿ ದಣಿವಾರಿಸಿಕೊಳ್ಳಲು ಇಂತಹ ಸುಸಜ್ಜಿತ ತಂಗುದಾಣಗಳಿದ್ದರೆ ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮ.ನ.ಪಾ ಸದಸ್ಯರುಗಳಾದ ಸಂಧ್ಯಾ ಆಚಾರ್ಯ, ಗಣೇಶ್ ಕುಲಾಲ್, ಪೂರ್ಣಿಮಾ, ಮತ್ತು ಮೋಹನ್ ಪೂಜಾರಿ, ರಾಧಾಕೃಷ್ಣ, ಮೋಹನ್ ಆಚಾರ್, ಶೇಖರ್, ಜಿತೇಶ್, ಗಣೇಶ್ ಸಾಲ್ಯಾನ್, ಮನೋಹರ್, ಹರೀಶ್, ರಾಜೇಶ್, ಆನಂದ ರೈ, ಪ್ರೀತಮ್, ಪ್ರಕಾಶ್, ರಘುನಾಥ ಪ್ರಭು, ಗುರು ಚರಣ್, ವಿಶು ಕುಮಾರ್, ಪ್ರಜೀತ್, ಕಿಶೋರ್, ಪ್ರಸಾದ್, ಮುರಳಿ, ಸೇರಿದಂತೆ ಅನೇಕ ಉಪಸ್ಥಿತರಿದ್ದರು.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…