ಜನ ಮನದ ನಾಡಿ ಮಿಡಿತ

Advertisement

ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಬಗ್ಗೆ ಪೋಷಕರಿಗೆ ಇರುವಷ್ಟೇ ಜವಬ್ದಾರಿ ಶಿಕ್ಷಕರಿಗೂ ಇರುತ್ತದೆ ಗ್ರಾ.ಪಂ‌ ಅಧ್ಯಕ್ಷೆ ಗೀತಾ ಸುರೇಶ್

ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಬಗ್ಗೆ ಪೋಷಕರಿಗೆ ಇರುವಷ್ಟೇ ಜವಬ್ದಾರಿ ಶಿಕ್ಷಕರಿಗೂ ಇರುತ್ತದೆ ಗ್ರಾ.ಪಂ‌ ಅಧ್ಯಕ್ಷೆ ಗೀತಾ ಸುರೇಶ್

 

 

ಹನಗೋಡು ಹೋಬಳಿಯ ನೇರಳಕುಪ್ಪೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ಗೀತಾ ರವರು, ಮಕ್ಕಳು ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳು ಶಿಕ್ಷಕರ ನಡೆ ನುಡಿಗಳನ್ನು ಅನುಕರಣೆ ಮಾಡುತ್ತಾರೆ. ಆದ್ದರಿಂದ ಶಿಕ್ಷಕರು ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಸಲಹೆ ನೀಡಿದರು.

ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಾಜೇಂದ್ರ ಮಾತನಾಡಿ ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳ ಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ದೇಹದಾರ್ಡ್ಯ ಹಾಗೂ ಆರೋಗ್ಯ ಹೊಂದುವಂತೆ ತಿಳಿಸಿದರು.

ತಾ.ಪಂ.ಮಾಜಿ‌ ಸದಸ್ಯ ಕೆ ಗಣಪತಿ, ಪ್ರೌಢಶಾಲಾ ಮುಖ್ಯ ಶಿಕ್ಷಕ ಕುಮಾರಸ್ವಾಮಿ, ಮೈಸೂರು
ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸದಸ್ಯ ನೇರಳಕುಪ್ಪೆ ಮಹದೇವ್, ಹಳೇ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ಎಚ್ ಆರ್ ಶ್ರೀನಿವಾಸ್ ಮಾತನಾಡಿದರು. ಮುಂದಿನ ತಿಂಗಳು ನಿವೃತ್ತಿ ಗೊಳ್ಳುವ ಶಾಲೆಯ ಮುಖ್ಯಶಿಕ್ಷಕ ದೊಡ್ಡ ಸ್ವಾಮಿ, ಸಹಶಿಕ್ಷಕ ಸ್ವಾಮಿ ಹಾಗೂ ವರ್ಗವಣೆ ಗೊಳ್ಳುವ ಸಿ ಆರ್ ಪಿ ಧರ್ಮರಾಜ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಭೆಯಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ರುಕ್ಮಿಣಿ ಸುರೇಶ್,ತಾ.ಪಂ ಮಾಜಿ ಸದಸ್ಯೆ ಪುಷ್ಪಲತಾ, ಗ್ರಾ.ಪಂ.ಸದಸ್ಯರಾದ ಉದಯನ್, ಅಮಾಸೆಗೌಡ, ಜವರಮ್ಮ, ಜಗದೀಶ, ಮುಖಂಡರಾದ ಕೆ ಎಸ್ ಆನಂದ್, ಲೋಕೇಶ್, ಸದಾಶಿವ, ಉಜ್ಜನಿಗೌಡ, ಬಾಬು, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗೇಂದ್ರ, ಉಪಾಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಮನು, ಕೆ ಬಿ ಕುಮಾರ್, ಮಹೇಶ್, ರಾಜ, ಶಿಕ್ಷಕರಾದ ಗಂಗರಾಜ್, ರೂಪ, ಛಾಯಾನಾಗೇಗೌಡ, ದೇವರಾಜ್, ಪ್ರಿಯಾಂಕ ಸೇರಿದಂತೆ ಇತರೆ ಮುಖಂಡರು ಹಾಗೂ ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!