ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!

ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!

ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಪವನ್ ಎಂಬಾತನ ಜೊತೆ ಇನ್ನಿಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್, ಶಂಶುದ್ದೀನ್, ಜಾಫರ್ ಸಾಧಿಕ್ , ಪ್ರವೀಣ್,ಅರವಿಂದ, ಉಮಾಶಂಕರ, ಪ್ರವೀಣ,ಶೋಧನ್ ,ವಿಜಯ ಕುಮಾರ್, ಮಹಮದ್ ಕಬೀರ ರವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ. ಅವರ ಬಳಿ ಇದ್ದ ನಗದು ರೂ 20500 ಹಾಗೂ ರೂ 1180 ಮೌಲ್ಯದ ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಮ್ಮ ತಮ್ಮ ಸ್ವಂತ ಲಾಭಕ್ಕಾಗಿ ಹಣವನ್ನು ಪಣವಾಗಿಟ್ಟು ಸಂಘಟಿತರಾಗಿ ಉಲಾಯಿ ಪಿದಾಯಿ ಜೂಜಾಟ ಆಡಿದ್ದಾರೆ. ಆಪಾದಿತರ ವಿರುದ್ಧ ಕಲಂ 112 ಬಿಎನ್‌ಎಸ್ ಮತ್ತು 87 ಕರ್ನಾಟಕ ಪೊಲೀಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!