ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!
ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಪವನ್ ಎಂಬಾತನ ಜೊತೆ ಇನ್ನಿಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್, ಶಂಶುದ್ದೀನ್, ಜಾಫರ್ ಸಾಧಿಕ್ , ಪ್ರವೀಣ್,ಅರವಿಂದ, ಉಮಾಶಂಕರ, ಪ್ರವೀಣ,ಶೋಧನ್ ,ವಿಜಯ ಕುಮಾರ್, ಮಹಮದ್ ಕಬೀರ ರವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ. ಅವರ ಬಳಿ ಇದ್ದ ನಗದು ರೂ 20500 ಹಾಗೂ ರೂ 1180 ಮೌಲ್ಯದ ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಮ್ಮ ತಮ್ಮ ಸ್ವಂತ ಲಾಭಕ್ಕಾಗಿ ಹಣವನ್ನು ಪಣವಾಗಿಟ್ಟು ಸಂಘಟಿತರಾಗಿ ಉಲಾಯಿ ಪಿದಾಯಿ ಜೂಜಾಟ ಆಡಿದ್ದಾರೆ. ಆಪಾದಿತರ ವಿರುದ್ಧ ಕಲಂ 112 ಬಿಎನ್ಎಸ್ ಮತ್ತು 87 ಕರ್ನಾಟಕ ಪೊಲೀಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…