ಬಂಟ್ವಾಳ; ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಟ; ಆರೋಪಿಗಳ ಬಂಧನ..!!
ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಪವನ್ ಎಂಬಾತನ ಜೊತೆ ಇನ್ನಿಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್, ಶಂಶುದ್ದೀನ್, ಜಾಫರ್ ಸಾಧಿಕ್ , ಪ್ರವೀಣ್,ಅರವಿಂದ, ಉಮಾಶಂಕರ, ಪ್ರವೀಣ,ಶೋಧನ್ ,ವಿಜಯ ಕುಮಾರ್, ಮಹಮದ್ ಕಬೀರ ರವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ. ಅವರ ಬಳಿ ಇದ್ದ ನಗದು ರೂ 20500 ಹಾಗೂ ರೂ 1180 ಮೌಲ್ಯದ ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಮ್ಮ ತಮ್ಮ ಸ್ವಂತ ಲಾಭಕ್ಕಾಗಿ ಹಣವನ್ನು ಪಣವಾಗಿಟ್ಟು ಸಂಘಟಿತರಾಗಿ ಉಲಾಯಿ ಪಿದಾಯಿ ಜೂಜಾಟ ಆಡಿದ್ದಾರೆ. ಆಪಾದಿತರ ವಿರುದ್ಧ ಕಲಂ 112 ಬಿಎನ್ಎಸ್ ಮತ್ತು 87 ಕರ್ನಾಟಕ ಪೊಲೀಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…