ಉಡುಪಿ: ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಯೋನೆಕ್ಸ್ ಸನ್ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ ಅವರು ಮಹಿಳೆಯರ ಡಬಲ್ಸ್ ನಲ್ಲಿ ವಿನ್ನರ್ಸ್, ಸಿಂಗಲ್ಸ್ ಹಾಗೂ ಮಿಶ್ರ ಡಬಲ್ಸ್ ರನ್ನರ್ಸ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಮಾರ್ಚ್ 16ರಿಂದ 22 ರವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟೀಯ ಚಾಂಪಿಯನ್ ಶಿಪ್ ಟೂರ್ನಿಮೆಂಟ್ ನ ಮೂರು ವಿಭಾಗಗಳಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಡಬಲ್ಸ್ ಪಾಲುದಾರ ಬಾನು ಎಸ್. ಬೆಂಗಳೂರು, ಮಿಶ್ರ ಡಬಲ್ಸ್ ಗೌತಮ್ ಶೆಟ್ಟಿ ಕುಂದಾಪುರ ಪಾಲುದಾರರಾಗಿದ್ದಾರೆ.
ಶಾಲಿನಿ ಶೆಟ್ಟಿ ಮತ್ತು ಬಾನು ಭಾರತದ 50+ ಮಹಿಳೆಯರ ವಿಭಾಗದಲ್ಲಿ ಟಾಪ್ 1 ರ್ಯಾಂಕಿಂಗ್ ನಲ್ಲಿದ್ದಾರೆ. 2025 ರ ಜನವರಿ 22 ರಿಂದ 28 ರವರೆಗೆ ನಡೆದ ಯೋನೆಕ್ಸ್ ಸನ್ರೈಸ್ ಆಲ್ ಇಂಡಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಹಾಗೂ ಪಂಚಕುಲ ಹರಿಯಾಣದಲ್ಲಿ ನಡೆದ ಮಹಿಳೆಯರ ಡಬಲ್ಸ್ ನಲ್ಲಿ ಕೂಡ ಈ ತಂಡ ಗೆದ್ದಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…