ಉಡುಪಿ: ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಯೋನೆಕ್ಸ್ ಸನ್ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ ಅವರು ಮಹಿಳೆಯರ ಡಬಲ್ಸ್ ನಲ್ಲಿ ವಿನ್ನರ್ಸ್, ಸಿಂಗಲ್ಸ್ ಹಾಗೂ ಮಿಶ್ರ ಡಬಲ್ಸ್ ರನ್ನರ್ಸ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಮಾರ್ಚ್ 16ರಿಂದ 22 ರವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟೀಯ ಚಾಂಪಿಯನ್ ಶಿಪ್ ಟೂರ್ನಿಮೆಂಟ್ ನ ಮೂರು ವಿಭಾಗಗಳಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಡಬಲ್ಸ್ ಪಾಲುದಾರ ಬಾನು ಎಸ್. ಬೆಂಗಳೂರು, ಮಿಶ್ರ ಡಬಲ್ಸ್ ಗೌತಮ್ ಶೆಟ್ಟಿ ಕುಂದಾಪುರ ಪಾಲುದಾರರಾಗಿದ್ದಾರೆ.
ಶಾಲಿನಿ ಶೆಟ್ಟಿ ಮತ್ತು ಬಾನು ಭಾರತದ 50+ ಮಹಿಳೆಯರ ವಿಭಾಗದಲ್ಲಿ ಟಾಪ್ 1 ರ್ಯಾಂಕಿಂಗ್ ನಲ್ಲಿದ್ದಾರೆ. 2025 ರ ಜನವರಿ 22 ರಿಂದ 28 ರವರೆಗೆ ನಡೆದ ಯೋನೆಕ್ಸ್ ಸನ್ರೈಸ್ ಆಲ್ ಇಂಡಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಹಾಗೂ ಪಂಚಕುಲ ಹರಿಯಾಣದಲ್ಲಿ ನಡೆದ ಮಹಿಳೆಯರ ಡಬಲ್ಸ್ ನಲ್ಲಿ ಕೂಡ ಈ ತಂಡ ಗೆದ್ದಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…