ಉಡುಪಿ: ಬೆಂಗಳೂರಿನ ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ನಲ್ಲಿ ಫೆಬ್ರವರಿ 7 ಮತ್ತು 8 ರಂದು ನಡೆದ ಯೋನೆಕ್ಸ್ ಸನ್ರೈಸಸ್ ಕರ್ನಾಟಕ ಸ್ಟೇಟ್ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಲ್ಲಿ ಉಡುಪಿಯ ಶಾಲಿನಿ ರಾಜೇಶ್ ಶೆಟ್ಟಿ ಅವರು ಮಹಿಳೆಯರ ಡಬಲ್ಸ್ ನಲ್ಲಿ ವಿನ್ನರ್ಸ್, ಸಿಂಗಲ್ಸ್ ಹಾಗೂ ಮಿಶ್ರ ಡಬಲ್ಸ್ ರನ್ನರ್ಸ್ ಅಪ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಮಾರ್ಚ್ 16ರಿಂದ 22 ರವರೆಗೆ ಗೋವಾದಲ್ಲಿ ನಡೆಯಲಿರುವ ರಾಷ್ಟೀಯ ಚಾಂಪಿಯನ್ ಶಿಪ್ ಟೂರ್ನಿಮೆಂಟ್ ನ ಮೂರು ವಿಭಾಗಗಳಲ್ಲಿ ಅರ್ಹತೆ ಪಡೆದುಕೊಂಡಿದ್ದಾರೆ. ಡಬಲ್ಸ್ ಪಾಲುದಾರ ಬಾನು ಎಸ್. ಬೆಂಗಳೂರು, ಮಿಶ್ರ ಡಬಲ್ಸ್ ಗೌತಮ್ ಶೆಟ್ಟಿ ಕುಂದಾಪುರ ಪಾಲುದಾರರಾಗಿದ್ದಾರೆ.
ಶಾಲಿನಿ ಶೆಟ್ಟಿ ಮತ್ತು ಬಾನು ಭಾರತದ 50+ ಮಹಿಳೆಯರ ವಿಭಾಗದಲ್ಲಿ ಟಾಪ್ 1 ರ್ಯಾಂಕಿಂಗ್ ನಲ್ಲಿದ್ದಾರೆ. 2025 ರ ಜನವರಿ 22 ರಿಂದ 28 ರವರೆಗೆ ನಡೆದ ಯೋನೆಕ್ಸ್ ಸನ್ರೈಸ್ ಆಲ್ ಇಂಡಿಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ಹಾಗೂ ಪಂಚಕುಲ ಹರಿಯಾಣದಲ್ಲಿ ನಡೆದ ಮಹಿಳೆಯರ ಡಬಲ್ಸ್ ನಲ್ಲಿ ಕೂಡ ಈ ತಂಡ ಗೆದ್ದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…