ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯ ಉದ್ಘಾಟನಾ ಕಾರ್ಯಕ್ರಮವು ನಗರದ ಶರವು ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಕಚೇರಿ ಉದ್ಘಾಟಿಸಿ ಮಾತನಾಡಿದ ಕಾಪು ಶ್ರೀ ಕ್ಷೇತ್ರದ ಹೊರೆಕಾಣಿಕೆ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಮಾತನಾಡಿ ತಾಯಿಯ ಅಪೇಕ್ಷೆ ಗಣಪತಿಯನ್ನು ಮುಂದಿಟ್ಟುಕೊಂಡು ಹೊರೆಕಾಣಿಕೆಗೆ ಸಿದ್ಧತೆ ಮಾಡಿ ಎನ್ನುವುದಾಗಿತ್ತು. ಅದೇ ರೀತಿ ಕಾಕತಾಳಿಯವೋ ಏನೋ ಪ್ರಥಮ ಕಚೇರಿ ಶರವು ಸಾನಿಧ್ಯದಲ್ಲಿ ನೆರವೇರಿದೆ ಎನ್ನುವುದು ತಾಯಿಯ ಪವಾಡಕ್ಕೆ ಸಾಕ್ಷಿ. ಭಕ್ತಾದಿಗಳು ಹೊರಕಾಣಿಕೆಗಳನ್ನು ಸಮರ್ಪಣೆ ಮಾಡುವ ಮೂಲಕ ದೇವರ ಕೃಪೆಗೆ ಪಾತ್ರರಾಗಬೇಕೆಂದು ವಿನಂತಿಸಿದರು.
ಬಳಿಕ ಮಾತನಾಡಿದ ಪದ್ಮರಾಜ್ ಪೂಜಾರಿ ಮದ್ಯಾಹ್ನ 1.30ಕ್ಕೆ ಹೊರೆಕಾಣಿಕೆಯ ಭವ್ಯ ಮೆರವಣಿಗೆ ಆರಂಭಗೊಳ್ಳಲಿದೆ. ಈ ಕಾರ್ಯಕ್ರಮ ಯಶಸ್ವಿಯಾಗಿಸಬೇಕೆಂದು ಸಾರ್ವಜನಿಕರಲ್ಲಿ ವಿನಂತಿಸಿಕೊಂಡರು.
ಕಾರ್ಯಕ್ರಮದಲ್ಲಿ ಶರವು ಕ್ಷೇತ್ರ ಆಡಳಿತ ಮುಖ್ಯಸ್ಥ ರಾಘವೇಂದ್ರ ಶಾಸ್ತ್ರಿ, ಹೊರೆಕಾಣಿಕೆ ಸಮಿತಿ ಉಪಾಧ್ಯಕ್ಷ ಚಂದ್ರಹಾಸ ಬಂಟ್ವಾಳ, ಪ್ರದಾನ ಕಾರ್ಯದರ್ಶಿ ಅರುಣ್ ಶೆಟ್ಟಿ ಪದೂರು ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…