ಕರಾವಳಿ

ಜಿಮ್; ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ; ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ

ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

 

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು.

ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿರುವ ವೊಲ್ವೊ ಸಂಸ್ಥೆ, ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, `ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತು. ಈಗ ನಮ್ಮಲ್ಲಿ ವೋಲ್ವೊ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ. ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೊ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ. ಕಂಪನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು’ ಎಂದರು.

ವೋಲ್ವೊ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, `ಕರ್ನಾಟಕದಲ್ಲಿ ಕಂಪನಿಯು ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್/ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್/ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಜತೆಗೆ ಸ್ಥಳೀಯ ಮಾರುಕಟ್ಟೆ ಅಗತ್ಯಗಳನ್ನೂ ಸರಾಗವಾಗಿ ಪೂರೈಸಲು ಸಾಧ್ಯವಾಗಲಿದೆ’ ಎಂದರು.

ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ. ಇಲ್ಲಿರುವ ನಮ್ಮ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು, ಇಲ್ಲಿ ಆರ್ & ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆಗಳನ್ನು ನಿರ್ವಹಿಸಲಾಗುತ್ತಿದೆ. ಇದಲ್ಲದೆ ಮಧ್ಯಪ್ರದೇಶದಲ್ಲಿ ಕೂಡ ಜಂಟಿ ಸಹಭಾಗಿತ್ವದ ಯೋಜನೆ ಜಾರಿಯಲ್ಲಿದೆ. ಕಂಪನಿಯ ವಹಿವಾಟು ಈಗ ವರ್ಷಕ್ಕೆ 50 ಬಿಲಿಯನ್ ಡಾಲರ್ ದಾಟಿದೆ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

15 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

16 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

16 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

19 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

20 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

20 hours ago