ಜನ ಮನದ ನಾಡಿ ಮಿಡಿತ

Advertisement

ರೀಲ್ಸ್ ಮಾಡಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದ ಯುವಕ..!!

ರೀಲ್ಸ್ ಮಾಡಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದ ಯುವಕ..!!

ರೀಲ್ಸ್ ಹುಚ್ಚು ಯುವಸಮುದಾಯವನ್ನು ಬೆನ್ನು ಬಿಡದೇ ಕಾಡುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಗವಿಬೆಟ್ಟದಲ್ಲಿ ನಡೆದ ಒಂದು ಘಟನೆ ಇದಕ್ಕೆ ಸಾಕ್ಷಿಯಾಗಿದೆ. ಹೌದು, ರೀಲ್ಸ್ ಮಾಡಲು ಹೋಗಿ ಯುವಕನೋರ್ವ ಆಯತಪ್ಪಿ ಬೆಟ್ಟದಿಂದ ಬಿದ್ದು, ಗಂಭೀರ ಸ್ವರೂಪದ ಗಾಯ ಮಾಡಿಕೊಂಡಿದ್ದಾನೆ. ಶನಿವಾರ ಸಂತೆಯಿAದ ತನ್ನ ಇಬ್ಬರು ಸ್ನೇಹಿತರ ಜೊತೆ ಗವಿಬೆಟ್ಟಕ್ಕೆ ಬಂದಿದ್ದ ರಾಶಿದ್ ಎಂಬ ಯುವಕ, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುತ್ತಿದ್ದ. ಈ ವೇಳೆ ಆಯತಪ್ಪಿ ಬೆಟ್ಟದ ಮೇಲಿಂದ ಸುಮಾರು ನೂರು ಅಡಿ ಆಳಕ್ಕೆ ಬಿದ್ದ ರಾಶಿದ್‌ನನ್ನು ಸ್ಥಳೀಯರು ರಕ್ಷಿಸಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಇದೀಗ ಶನಿವಾರ ಸಂತೆ ಆಸ್ಪತ್ರೆಯಲ್ಲಿ ರಾಶೀದ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!