ರೀಲ್ಸ್ ಹುಚ್ಚು ಯುವಸಮುದಾಯವನ್ನು ಬೆನ್ನು ಬಿಡದೇ ಕಾಡುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಗವಿಬೆಟ್ಟದಲ್ಲಿ ನಡೆದ ಒಂದು ಘಟನೆ ಇದಕ್ಕೆ ಸಾಕ್ಷಿಯಾಗಿದೆ. ಹೌದು, ರೀಲ್ಸ್ ಮಾಡಲು ಹೋಗಿ ಯುವಕನೋರ್ವ ಆಯತಪ್ಪಿ ಬೆಟ್ಟದಿಂದ ಬಿದ್ದು, ಗಂಭೀರ ಸ್ವರೂಪದ ಗಾಯ ಮಾಡಿಕೊಂಡಿದ್ದಾನೆ. ಶನಿವಾರ ಸಂತೆಯಿAದ ತನ್ನ ಇಬ್ಬರು ಸ್ನೇಹಿತರ ಜೊತೆ ಗವಿಬೆಟ್ಟಕ್ಕೆ ಬಂದಿದ್ದ ರಾಶಿದ್ ಎಂಬ ಯುವಕ, ಬೆಟ್ಟದ ತುದಿಯಲ್ಲಿ ನಿಂತು ರೀಲ್ಸ್ ಮಾಡುತ್ತಿದ್ದ. ಈ ವೇಳೆ ಆಯತಪ್ಪಿ ಬೆಟ್ಟದ ಮೇಲಿಂದ ಸುಮಾರು ನೂರು ಅಡಿ ಆಳಕ್ಕೆ ಬಿದ್ದ ರಾಶಿದ್ನನ್ನು ಸ್ಥಳೀಯರು ರಕ್ಷಿಸಿ ಪೊಲೀಸರಿಗೆ ಕರೆ ಮಾಡಿದ್ದಾರೆ. ಇದೀಗ ಶನಿವಾರ ಸಂತೆ ಆಸ್ಪತ್ರೆಯಲ್ಲಿ ರಾಶೀದ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಯಸಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…