ಮಂಗಳೂರು : ಲಯನ್ಸ್ ಜಿಲ್ಲೆ 317D ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿನ ಲಯನ್ಸ್ ಲಿಂಬ್ ಸೆಂಟರ್ ಸಹಯೋಗದಲ್ಲಿ 2024 – 25 ನೇ ಸಾಲಿನ ಲಯನ್ಸ್ ವರ್ಷದ ಲಯನ್ಸ್ ಜಿಲ್ಲಾ ಯೋಜನೆ ಅಡಿಯಲ್ಲಿ 35 ಅರ್ಹ ವಿಕಾಲಾಂಗರಿಗೆ ಕೃತಕ ಅಂಗಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ವಿಶೇಷ ಯೋಜನೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅರ್ಹ ವಿಕಲಾಂಗರಿಗೆ ಮೀಸಲಾಗಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶೀಘ್ರವೇ ವಿತರಿಸಲಾಗುವುದು, ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸುವ ಕಾರ್ಯ ಶುರುವಾಗಿದೆ ಎಂದು ಲಯನ್ಸ್ ಲಿಂಬ್ ಸೆಂಟರ್ ನ ನಿರ್ದೇಶಕರಾಗಿರುವ ಡಾ. ಎಂ. ಶಾಂತರಾಮ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಘಾತದಲ್ಲಿ ಅಂಗವಿಕಲರಾಗಿರುವವರಿಗೆ ಕೃತಕ ಕಾಲಿನ ಜೋಡಣೆಯ ಪ್ರಕ್ರಿಯೆಯನ್ನು ನಡೆಸಲಾಗುವುದು . ಈ ರೀತಿಯ ಕೃತಕ ಕಾಲುಗಳು ಸಂಪೂರ್ಣ ಸ್ಟೀಲ್ ಲೋಹದಿಂದ ಮಾಡಲ್ಪಟ್ಟಿರುತಗತವೆ, ಒಂದು ಕೃತಕ ಕಾಲಿಗೆ ಅಂದಾಜು ೨. ೫ ಲಕ್ಷ ರೂ ವೆಚ್ಚ ತಗುಲುತ್ತದೆ . ಈ ವೆಚ್ಚವನ್ನು ಲಯನ್ಸ್ ಸಂಸ್ಥೆಯೇ ಖುದ್ದು ಭರಿಸಲಿದೆ ಎಂದರು. ಜೊತೆಗೆ ಯಾವ ರೀತಿಯಾಗಿ ನಡೆದಾಡ ಬೇಕು ಎನ್ನುವ ತರಬೇತಿಯನ್ನು ನಮ್ಮ ಸಂಸ್ಥೆಯವರು ನೀಡುತ್ತಾರೆ . ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮದಂತೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಜಿಲ್ಲೆ 317 ಡಿ ಯ ಭಾರತಿ ಬಿ ಎಂ , ಸುರೇಶ್ ಶೆಟ್ಟಿ , ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…