ಮಂಗಳೂರು : ಲಯನ್ಸ್ ಜಿಲ್ಲೆ 317D ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿನ ಲಯನ್ಸ್ ಲಿಂಬ್ ಸೆಂಟರ್ ಸಹಯೋಗದಲ್ಲಿ 2024 – 25 ನೇ ಸಾಲಿನ ಲಯನ್ಸ್ ವರ್ಷದ ಲಯನ್ಸ್ ಜಿಲ್ಲಾ ಯೋಜನೆ ಅಡಿಯಲ್ಲಿ 35 ಅರ್ಹ ವಿಕಾಲಾಂಗರಿಗೆ ಕೃತಕ ಅಂಗಗಳನ್ನು ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ವಿಶೇಷ ಯೋಜನೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅರ್ಹ ವಿಕಲಾಂಗರಿಗೆ ಮೀಸಲಾಗಿದ್ದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶೀಘ್ರವೇ ವಿತರಿಸಲಾಗುವುದು, ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸುವ ಕಾರ್ಯ ಶುರುವಾಗಿದೆ ಎಂದು ಲಯನ್ಸ್ ಲಿಂಬ್ ಸೆಂಟರ್ ನ ನಿರ್ದೇಶಕರಾಗಿರುವ ಡಾ. ಎಂ. ಶಾಂತರಾಮ್ ಶೆಟ್ಟಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಘಾತದಲ್ಲಿ ಅಂಗವಿಕಲರಾಗಿರುವವರಿಗೆ ಕೃತಕ ಕಾಲಿನ ಜೋಡಣೆಯ ಪ್ರಕ್ರಿಯೆಯನ್ನು ನಡೆಸಲಾಗುವುದು . ಈ ರೀತಿಯ ಕೃತಕ ಕಾಲುಗಳು ಸಂಪೂರ್ಣ ಸ್ಟೀಲ್ ಲೋಹದಿಂದ ಮಾಡಲ್ಪಟ್ಟಿರುತಗತವೆ, ಒಂದು ಕೃತಕ ಕಾಲಿಗೆ ಅಂದಾಜು ೨. ೫ ಲಕ್ಷ ರೂ ವೆಚ್ಚ ತಗುಲುತ್ತದೆ . ಈ ವೆಚ್ಚವನ್ನು ಲಯನ್ಸ್ ಸಂಸ್ಥೆಯೇ ಖುದ್ದು ಭರಿಸಲಿದೆ ಎಂದರು. ಜೊತೆಗೆ ಯಾವ ರೀತಿಯಾಗಿ ನಡೆದಾಡ ಬೇಕು ಎನ್ನುವ ತರಬೇತಿಯನ್ನು ನಮ್ಮ ಸಂಸ್ಥೆಯವರು ನೀಡುತ್ತಾರೆ . ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ನಿಯಮದಂತೆ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
ಸುದ್ದಿಗೋಷ್ಠಿಯಲ್ಲಿ ಲಯನ್ಸ್ ಜಿಲ್ಲೆ 317 ಡಿ ಯ ಭಾರತಿ ಬಿ ಎಂ , ಸುರೇಶ್ ಶೆಟ್ಟಿ , ವಸಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…