ಸರಕಾರಿ ಪ್ರೌಢಶಾಲೆ ಎಲಿಮಲೆಗೆ ಸ್ಮಾರ್ಟ್ ಟಿವಿ/ಬೋರ್ಡ್ ಕೊಡುಗೆ
ದಕ್ಷಿಣ ಕನ್ನಡ : ಇನ್ಸ್ಟಿಟ್ಯೂಟ್ ಫಾರ್ ಗ್ಲೋಬಲ್ ಡೆವಲಪ್ಮೆಂಟ್ ಸಂಸ್ಥೆಯ ಸಂಯೋಜನೆಯಲ್ಲಿ ಐ ಟಿ ಸಿ ಆಶಿರ್ವಾದ್ ಸ್ಮಾರ್ಟ್ ಇಂಡಿಯಾ” ಸಹಭಾಗಿತ್ವದೊಂದಿಗೆ ಸರಕಾರಿ ಪ್ರೌಢ ಶಾಲೆಗೆ ದಿನಾಂಕ:20-02-2025 ನೇ ಗುರುವಾರರಂದು ಸ್ಮಾರ್ಟ್ ಟಿವಿ ಕೊಡುಗೆ ಹಾಗೂ ಅಯೋಡಿನ್ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಗೆಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಸಮಾಜ ಸೇವೆ ಮತ್ತು ಮಕ್ಕಳ ಆರೋಗ್ಯ ಎಂಬ ಧ್ಯೇಯದೊಂದಿಗೆ ಈ ಮೇಲಿನ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಕಾರ್ಯಕ್ರಮ ಸಂಯೋಜಕರಾದ ಗಣೇಶ್ ಬಂಗಾಡಿ ಪ್ರಸ್ತಾವನೆ ಯೊಂದಿಗೆ ಆರಂಭಗೊಂಡಿತು, ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಧನಂಜಯ ಬಾಳೆತೋಟ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ವರು ಸ್ಮಾರ್ಟ್ ಟಿವಿ ಹಾಗೂ ಆರೋಗ್ಯಕರ ಆಹಾರದ ಸಲಹೆ ಭಿತ್ತಿ ಚಿತ್ರವನ್ನು ಅನಾವರಣಗೊಳಿಸಿದರು. ಎಲಿಮಲೆ ಸಮುದಾಯ ಆರೋಗ್ಯ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿಗಳಾದ ಕುಮಾರಿ ಮೋನಿಷಾ ಇವರು ಅಯೋಡಿನ್ ಮತ್ತು ಸೂಕ್ಷ್ಮ ಪೋಷಕಾಂಶಗಳ ಬಗೆಗೆ ವಿಧ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಸೇವಾಜೆ, ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಅಧ್ಯಕ್ಷರಾದ ರಾಜೇಶ್ ಅಂಬೆಕಲ್ಲು, ಐ ಜೆ ಡಿ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಗಣೇಶ್ ಬಂಗಾಡಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಂಧ್ಯಾ ಕೆ, ಎಸ್ ಡಿ ಎಂ ಸಿ ಸದಸ್ಯರಾದ ಪುರುಷೋತ್ತಮ , ಕೃಷ್ಣಪ್ಪ ಗೌಡ ಹರ್ಲಡ್ಕ, ಮಾಧವ ಶೀರಡ್ಕ, ಅಚ್ಚುತ ಮುಂಡೋಕಜೆ,ವಿಶಾಲಾಕ್ಷಿ, ಲೀಲಾವತಿ ಹರ್ಲಡ್ಕ ಉಪಸ್ಥಿತರಿದ್ದರು.
ಐ ಜಿ ಡಿ ಸಂಸ್ಥೆಯ ತಾಲೂಕು ಸಂಯೋಜಕರಾದ ಜ್ಞಾನೇಶ್(ಸುಳ್ಯ), ಪ್ರಜ್ಞಾ (ಕಡಬ), ಪವಿತ್ರ (ಪುತ್ತೂರು) ರಮಿತ (ಬೆಳ್ತಂಗಡಿ), ಚೈತ್ರ (ಮಂಗಳೂರು). ದೇವಚಳ್ಳ ಗ್ರಾಮ ಪಂಚಾಯತ್ ಗ್ರಂಥಪಾಲಕರಾದ ಪ್ರಫುಲ್ಲ ಶ್ರೀಕಾಂತ್ ಪಾರೆಪ್ಪಾಡಿ, ಕೇಶವ ಕಾಯರ ,ಶಿಕ್ಷಕರು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಸ್ವಾಗತಿಸಿ ,ರಮಿತ ಧನ್ಯವಾದ ಅರ್ಪಿಸಿದರು ಕುಮಾರಿ ಪ್ರಜ್ಞಾ ಕಾರ್ಯಕ್ರಮ ನಿರೂಪಿಸಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…