ಉಡುಪಿ: ಖಾಸಗಿ ಬಸ್ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಸಂಭವಿಸಿದೆ. ಉಡುಪಿಯಿಂದ ಮಣಿಪಾಲದತ್ತ ಹೋಗುತ್ತಿದ್ದ ಖಾಸಗಿ ಬಸ್, ಪರ್ಕಳ ಕಡೆ ಹೋಗುತ್ತಿದ್ದ ಟಿವಿಎಸ್ ಮೊಪೆಡ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ರಮೇಶ ಪ್ರಭು (69) ಹಾಗೂ ಸಹಸವಾರೆ ಶ್ರೀದೇವಿ ಪ್ರಭು(42) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ ಆಡಳಿತ ಸೌಧದ ಕಚೇರಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಅಳವಡಿಸಲಾಗಿರುವ ಲಿಪ್ಟ್ನೊಳಗೆ ಇಬ್ಬರು ವ್ಯಕ್ತಿಗಳು ಸುಮಾರು 45 ನಿಮಿಷಗಳ ಕಾಲ ಸಿಲುಕಿಕೊಂಡು…
ಶಾಲೆಗಳು ವಿದ್ಯಾರ್ಥಿ ಸ್ನೇಹಿಯಾಗಿರಬೇಕು, ಮಕ್ಕಳು ಸಂಭ್ರಮದಿಂದ ಕಲಿಕೆಯಲ್ಲಿ ತೊಡಗಬೇಕೆನ್ನುವ ಮಹತ್ವಕಾಂಕ್ಷೆ ಎಲ್ಲರಲ್ಲೂ ಇದೆ. ಬೇಸಿಗೆ ರಜೆಯ ಮಜಾವನ್ನು ಕಳೆದು ಸಪ್ಪೆ…
ಟೈಲ್ಸ್ ಸಾಗಿಸುತ್ತಿದ್ದ ಪಾಜೆರೋ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬ್ರಹ್ಮಾವರ ಸಮೀಪದ ಧರ್ಮಾವರಂ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.…
ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ದಾರುಣ ಘಟನೆ ಬ್ರಹ್ಮಾವರ…
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…