ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 35, ಕಾರ್ಮಿಕ ಕಾಲೋನಿ ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಗನವಾಡಿ ಕೇಂದ್ರವನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು
ನಂತರ ಮಾತನಾಡಿದ ಶಾಸಕರು, ಅಂಗನವಾಡಿ ಕೇಂದ್ರಗಳು ಈ ದೇಶದ ಭವಿಷ್ಯವಾಗಿರುವ ಮುಂದಿನ ಪೀಳಿಗೆಯನ್ನು ಉತ್ತಮ ಪ್ರಜೆಯನ್ನಾಗಿಸುವ ಮೊದಲ ಹಂತದ ಜ್ಞಾನ ದೇಗುಲಗಳು. ಇಲ್ಲಿ ಆಡಿ ಬೆಳೆದ ಕಂದಮ್ಮಗಳು ಮುಂದೆ ಈ ದೇಶದ ಭವಿಷ್ಯವನ್ನು ಬೆಳಗಲಿ ಎಂದು ಹಾರೈಸುತ್ತೇನೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಮನಪಾ ಸದಸ್ಯ ಕಿಶೋರ್ ಕೊಟ್ಟಾರಿಯವರು ವಹಿಸಿಕೊಂಡಿದ್ದು, ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ರವಿಚಂದ್ರ, ಅಶ್ವಿತ್ ಕೊಟ್ಟಾರಿ, ರಮೇಶ್ ಹೆಗ್ಡೆ, ಹರೀಶ್ ರೈ, ವಾಸುದೇವ, ಸುನಿಲ್ ಕುಮಾರ್, ದೇವಿ ಪ್ರಸಾದ್, ರುಫಿನಾ ಟೀಚರ್, ಚಂಪಾ, ಭರತ್ ಕುಮಾರ್, ಹೆನ್ರಿ, ತೇಜಸ್, ಮಹೇಶ್, ರೂಪ, ಉಮೇಶ್ ಕುಲಾಲ್, ಯತೀಶ್, ನಿತಿನ್ ಕುಮಾರ್, ಶ್ರವಣ್, ದಿವಾಕರ್, ಸವಿತಾ ರೈ, ಮಾಧವ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…