ಜನ ಮನದ ನಾಡಿ ಮಿಡಿತ

Advertisement

ಗಾನವಿ ಪೂಜಾರಿ ಅಮನಬೆಟ್ಟು ಮಾರ್ನಾಡು ಮೂಡುಬಿದಿರೆ

ಗಾನವಿ ಪೂಜಾರಿ ಅಮನಬೆಟ್ಟು ಮಾರ್ನಾಡು ಮೂಡುಬಿದಿರೆ

 

ಗಾನವಿ ಪೂಜಾರಿಯವರ ತಂದೆಯ ಹೆಸರು ಸುರೇಂದ್ರ ಸಿ ಪೂಜಾರಿ ತಾಯಿ ಆಶಾ ಸುರೇಂದ್ರ ಪೂಜಾರಿ. ಇವರು ಅಡ್ಕರೆ ಅಮನಬೆಟ್ಟು ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆ ಅಲಂಗಾರಿನಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಇವರು ಮಹಾಮಾಯಿ ಭಜನಾ ಮಂಡಳಿ ಕೋಟೆಬಾಗಿಲಿನ ಭಜಕಿ. ಇವರು ಅಶೋಕ್ ನಾಯಕ್ ಕಳಸಬೈಲು ಇವರೊಂದಿಗೆ ಕುಣಿತ ಭಜನೆ ಕಲಿಯುತ್ತಾ ಇದ್ದಾರೆ. ಇಷ್ಟರ ತನಕ ಸಾರ್ವಜನಿಕ ವಲಯದಲ್ಲಿ 39 ಕಡೆ ಭಜನೆ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ. ಇವರಿಗೆ ಸಂಗೀತದಲ್ಲಿ ಆಸಕ್ತಿ ಇದ್ದು, ತುಳಸಿ ಪೆಜತ್ತಾಯ ಇವರ ಬಳಿ ಸಂಗೀತವನ್ನು ಕಲಿಯುತ್ತಾ ಇದ್ದಾರೆ. ಇವರು ಯಕ್ಷಗಾನ,ಕಥೆ ಹೇಳುವುದು, ಕುಣಿತ ಭಜನೆ, ಏಕಪಾತ್ರ ಅಭಿನಯ, ಭಕ್ತಿಗೀತೆ, ಸಂಗೀತ, ನೃತ್ಯದಲ್ಲಿ ಆಸಕ್ತಿಯನ್ನು ಹೊಂದಿರುತ್ತಾಳೆ. ಇವಳು ಏಕಪಾತ್ರ ಅಭಿನಯದಲ್ಲಿ ನಟಿಸಿ ಪ್ರೋತ್ಸಾಹ ಮತ್ತು ಬಹುಮಾನವನ್ನು ಗಳಿಸಿರುತ್ತಾರೆ. ಕಳೆದ ವರ್ಷ ಪ್ರತಿಭಾ ಕಾರಂಜಿಯಲ್ಲಿ ನಡೆದ ತಾಲೂಕು ಮಟ್ಟದ ಕಥೆ ಹೇಳುವುದರಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ಇವರು ರಾಜ್ಯ ಮಟ್ಟದ ಕುಣಿತ ಭಜನೆಯಲ್ಲಿ ಭಾಗವಹಿಸಿರುತ್ತಾರೆ. ಸಾರ್ವಜನಿಕ ವಲಯದಲ್ಲಿ ನಡೆಯುವ ಗಣೇಶೋತ್ಸವ ಅಥವಾ ಶಾರದೋತ್ಸವ ಇರಬಹುದು ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ. ವಾಯ್ಸ್ ಆಫ್ ಆರಾಧನಾ ಸಂಸ್ಥೆಯ ಮುಖ್ಯಸ್ಥರಾದ ಪದ್ಮಶ್ರೀ ಮೇಡಂ ಇವರ ನೇತ್ರತ್ವದಲ್ಲಿ ನಡೆದ ಹಲವಾರು ಕಡೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುತ್ತಾರೆ ಹಾಗೂ ಅಭಿನಂದನೆ ಪತ್ರವನ್ನು ಪಡೆದಿರುತ್ತಾರೆ. ವಾಯ್ಸ್ ಆಫ್ ಆರಾಧನಾ ವತಿಯಿಂದ ನಡೆಯುವಂತಹ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಇಷ್ಟರ ತನಕ 28 ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ. ಎಲ್ಲರ ಮೆಚ್ಚುಗೆಯನ್ನು ಪಡೆದಿರುತ್ತಾರೆ. ಅಭಿಮತ ಮಾಧ್ಯಮದಲ್ಲಿ ಪ್ರತಿಭಾ ಲೋಕದಲ್ಲಿ ಭಾಗವಹಿಸಿ ಹಾಗೂ ಪ್ರತಿಭಾಚುಕ್ಕಿ ಕಾರ್ಯಕ್ರಮದಲ್ಲಿ ಒಳ್ಳೆಯ ಮಾತುಗಾರಿಕೆಯಿಂದ ಅಭಿನಂದನೆ ಪತ್ರ ಸಿಕ್ಕಿರುತ್ತದೆ. ಮೈಸೂರಿನಲ್ಲಿ ನಡೆದಂತಹ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿರುತ್ತಾರೆ. ಹಾಗು ಈ ವರ್ಷ ಇವಳಿಗೆ ಕಲಾ ರತ್ನ ಪ್ರಶಸ್ತಿ ಲಭಿಸಿರುತ್ತದೆ. ಹಾಗು ರಾಜ್ಯಮಟ್ಟದ ಮಕ್ಕಳ ಹಬ್ಬ ದಲ್ಲಿ ಭಾಗವಹಿಸಿರುತ್ತಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!