ಜನ ಮನದ ನಾಡಿ ಮಿಡಿತ

Advertisement

ರಿಧಿ ಪಿ ಬಂಗೇರ ಕೋಟೆಬಾಗಿಲು ಮೂಡಬಿದಿರೆ

ರಿಧಿ ಪಿ ಬಂಗೇರ ಕೋಟೆಬಾಗಿಲು ಮೂಡಬಿದಿರೆ

ಇವರು ಶ್ರೀ ಪ್ರದೀಪ್ ಗಾಣಿಗ ಹಾಗೂ ಶ್ರೀಮತಿ ರೂಪ ದಂಪತಿಗಳ ಪ್ರಥಮ ಪುತ್ರಿಯಾಗಿದ್ದು, ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದರೆ ಇಲ್ಲಿ ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲ ಪ್ರತಿಭೆ. ಈಕೆ ನೃತ್ಯ, ಹಾಡು, ಚಿತ್ರಕಲೆ, ಕುಣಿತ ಭಜನೆ ಹಾಗು ಭರತನಾಟ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಭರತನಾಟ್ಯವನ್ನು ಶ್ರೀಮತಿ ಸುಖಧಾ ಭಾರ್ವೆ ಅವರಲ್ಲಿ ಕಲಿಯುತ್ತಿದಾರೆ. ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಅಂಗವಾದ ಬುಲ್ – ಬುಲ್ ವಿಭಾಗದ ಅಂತಿಮ ಪರೀಕ್ಷೆಯಾದ ಗೋಲ್ಡನ್ ಆರೋ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡ ಕೀರ್ತಿ ಇವರದ್ದು. ಚಿತ್ರಕಲೆಯಲ್ಲಿ ಹಲವಾರು ಬಹುಮಾನಗಳನ್ನು ಗಳಿಸಿದ್ದಾರೆ. ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕನ್ನಡ ಕಂಠಪಾಠದಲ್ಲಿ ತೃತೀಯ ಬಹುಮಾನಗಳಿಸಿದ ಕೀರ್ತಿ ಇವರಿಗಿದೆ. ಶಾಲೆಯಲ್ಲಿ ಸಾಮಾನ್ಯ ಪ್ರಾವೀಣ್ಯತೆ ಪ್ರಶಸ್ತಿ ಪಡೆದಿರುವ ಹೆಮ್ಮೆಯ ಬಾಲ ಪ್ರತಿಭೆ. ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ ಕೀರ್ತಿ ಇವರಿಗಿದೆ. ಹಲವಾರು ಕುಣಿತ ಭಜನೆ ಕಾರ್ಯಕ್ರಮ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಿರುತ್ತಾರೆ. ಅಭಿಮತ ವಾಹಿನಿಯಲ್ಲಿ ಪ್ರಸಾರವಾಗುವ ಪ್ರತಿಭಾ ಚುಕ್ಕಿ, ಪ್ರತಿಭಾ ಲೋಕ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ. ಆಕ್ಸಿಸ್ ಮ್ಯಾಕ್ಸ್ ವತಿಯಿಂದ ಕೊಡಲ್ಪಡುವ ಬಾಲ ರತ್ನ ಪ್ರಶಸ್ತಿಯನ್ನು ಗಳಿಸಿರುವ ಗಾಣಿಗ ಸಮಾಜದ ಹೆಮ್ಮೆಯ ಬಾಲ ಪ್ರತಿಭೆ.ವಾಯ್ಸ್ ಆಫ್ ಆರಾಧನಾ ವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಶುಭನುಡಿಗಳನ್ನು ಹೇಳುವ ಮೂಲಕ ಎಲ್ಲರ ಮನೆಮಾತದ ಪ್ರತಿಭೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!