ಜನ ಮನದ ನಾಡಿ ಮಿಡಿತ

Advertisement

ರಿಧಿ ಪಿ ಬಂಗೇರ ಕೋಟೆಬಾಗಿಲು ಮೂಡಬಿದಿರೆ

ರಿಧಿ ಪಿ ಬಂಗೇರ ಕೋಟೆಬಾಗಿಲು ಮೂಡಬಿದಿರೆ

ಇವರು ಶ್ರೀ ಪ್ರದೀಪ್ ಗಾಣಿಗ ಹಾಗೂ ಶ್ರೀಮತಿ ರೂಪ ದಂಪತಿಗಳ ಪ್ರಥಮ ಪುತ್ರಿಯಾಗಿದ್ದು, ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡಬಿದರೆ ಇಲ್ಲಿ ನಾಲ್ಕನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲ ಪ್ರತಿಭೆ. ಈಕೆ ನೃತ್ಯ, ಹಾಡು, ಚಿತ್ರಕಲೆ, ಕುಣಿತ ಭಜನೆ ಹಾಗು ಭರತನಾಟ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಭರತನಾಟ್ಯವನ್ನು ಶ್ರೀಮತಿ ಸುಖಧಾ ಭಾರ್ವೆ ಅವರಲ್ಲಿ ಕಲಿಯುತ್ತಿದಾರೆ. ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ನ ಅಂಗವಾದ ಬುಲ್ – ಬುಲ್ ವಿಭಾಗದ ಅಂತಿಮ ಪರೀಕ್ಷೆಯಾದ ಗೋಲ್ಡನ್ ಆರೋ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮುದ್ದುಕೃಷ್ಣ ಸ್ಪರ್ಧೆಯಲ್ಲಿ ಹಲವಾರು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡ ಕೀರ್ತಿ ಇವರದ್ದು. ಚಿತ್ರಕಲೆಯಲ್ಲಿ ಹಲವಾರು ಬಹುಮಾನಗಳನ್ನು ಗಳಿಸಿದ್ದಾರೆ. ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕನ್ನಡ ಕಂಠಪಾಠದಲ್ಲಿ ತೃತೀಯ ಬಹುಮಾನಗಳಿಸಿದ ಕೀರ್ತಿ ಇವರಿಗಿದೆ. ಶಾಲೆಯಲ್ಲಿ ಸಾಮಾನ್ಯ ಪ್ರಾವೀಣ್ಯತೆ ಪ್ರಶಸ್ತಿ ಪಡೆದಿರುವ ಹೆಮ್ಮೆಯ ಬಾಲ ಪ್ರತಿಭೆ. ರಾಜ್ಯ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ ಕೀರ್ತಿ ಇವರಿಗಿದೆ. ಹಲವಾರು ಕುಣಿತ ಭಜನೆ ಕಾರ್ಯಕ್ರಮ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸಿರುತ್ತಾರೆ. ಅಭಿಮತ ವಾಹಿನಿಯಲ್ಲಿ ಪ್ರಸಾರವಾಗುವ ಪ್ರತಿಭಾ ಚುಕ್ಕಿ, ಪ್ರತಿಭಾ ಲೋಕ ಕಾರ್ಯಕ್ರಮದಲ್ಲಿ ಭಾಗವಹಿಸಿರುತ್ತಾರೆ. ಆಕ್ಸಿಸ್ ಮ್ಯಾಕ್ಸ್ ವತಿಯಿಂದ ಕೊಡಲ್ಪಡುವ ಬಾಲ ರತ್ನ ಪ್ರಶಸ್ತಿಯನ್ನು ಗಳಿಸಿರುವ ಗಾಣಿಗ ಸಮಾಜದ ಹೆಮ್ಮೆಯ ಬಾಲ ಪ್ರತಿಭೆ.ವಾಯ್ಸ್ ಆಫ್ ಆರಾಧನಾ ವತಿಯಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಶುಭನುಡಿಗಳನ್ನು ಹೇಳುವ ಮೂಲಕ ಎಲ್ಲರ ಮನೆಮಾತದ ಪ್ರತಿಭೆ.

Leave a Reply

Your email address will not be published. Required fields are marked *

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

ಬಂಟ್ವಾಳ: ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಸರಣಿ ಅಪ*ಘಾತ….!

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಹುಣಸೂರು: ಹುಣಸೂರು ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ….!

error: Content is protected !!