ವಿವಾದ ಸೃಷ್ಟಿಸಿತು ಮಂಗಳೂರು ಎಂಎಸ್ಇಝಡ್ ನಡೆ; ಕಾಂತಾರ ಸ್ಟೈಲಲ್ಲಿ ದೈವಾಚರಣೆ ತಡೆ ಯತ್ನ
ಮಂಗಳೂರು: ನಗರದ ಹೊರವಲಯದ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಮೊನ್ನೆ ಸಂಕ್ರಮಣ ದಿನದಂದು ನಡೆದ ದೈವರಾಧನೆಯ ಹೊತ್ತಲ್ಲಿ ಆಕ್ರೋಶ ಗರ್ಭಿತವಾಗಿ ನುಡಿದಿದೆ. ದೈವಗಳ ಆಚರಣೆ ಬಂದ್ ಮಾಡಿಸಲು ಮಂಗಳೂರು ವಿಶೇಷ ಆರ್ಥಿಕ ವಲಯ ಮುಂದಾಗಿದೆ. ಇದು ಮಂಗಳೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಎಂಎಸ್ಇಝಡ್ ವ್ಯಾಪ್ತಿಯಲ್ಲಿರುವ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ತಡೆ ಆರೋಪ ಎದುರಾಗಿದೆ. 800 ವರ್ಷಗಳ ಇತಿಹಾಸವಿರುವ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಘಟನೆ ನಡೆದಿದೆ. 2006ರಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಸಾವಿರಾರು ಎಕರೆ ಜನವಸತಿ ಜಾಗ ಸರ್ಕಾರದಿಂದ ಭೂ ಸ್ವಾಧೀನವಾಗಿತ್ತು. ಬಜ್ಪೆ, ಬಾಳ, ಕುತ್ತೆತ್ತೂರು, ಪೆರ್ಮುದೆ ಕಳವಾರು ಗ್ರಾಮದ ಸಾವಿರಾರು ಎಕರೆ ಭೂ ಸ್ವಾಧೀನವಾಗಿದೆ. ಸಮೃದ್ಧ ಗದ್ದೆಗಳು, ಸಾವಿರಾರು ನಾಗಬನಗಳು, ಬ್ರಹ್ಮಸ್ಥಾನಗಳು, ದೈವದ ಗುಡಿಗಳು, ಕೆರೆ, ತೊರೆ, ಶಾಲೆ, ಚರ್ಚು, ಮಸೀದಿ ಹೀಗೆ ಸಾವಿರಾರು ಮನೆಗಳು ಭೂ ಸ್ವಾಧೀನಕ್ಕೆ ನೆಲಸಮಗೊಂಡಿದೆ. ಆದರೆ 800 ವರ್ಷಗಳ ಇತಿಹಾಸವಿದ್ದ ನೆಲ್ಲಿದಡಿ ಗುತ್ತಿನ ದೇವಸ್ಥಾನ ಮುಟ್ಟಲಾಗಲಿಲ್ಲ. ನೆಲ್ಲಿದಡಿ ಗುತ್ತಿನ ಪೂರ್ತಿ ಜಾಗವನ್ನು ಕಂಪನಿ ಬಲಾತ್ಕಾರದಿಂದ ತನ್ನ ಹೆಸರಿಗೆ ಬರೆಸಿಕೊಂಡರೂ ದೈವಸ್ಥಾನ ಮಟ್ಟಲಾಗಲಿಲ್ಲ. ಸದ್ಯ ಕಂಪೆನಿ ಅಧಿಕಾರಿಗಳ ನಡೆಯ ವಿರುದ್ದ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…