ವಿವಾದ ಸೃಷ್ಟಿಸಿತು ಮಂಗಳೂರು ಎಂಎಸ್ಇಝಡ್ ನಡೆ; ಕಾಂತಾರ ಸ್ಟೈಲಲ್ಲಿ ದೈವಾಚರಣೆ ತಡೆ ಯತ್ನ
ಮಂಗಳೂರು: ನಗರದ ಹೊರವಲಯದ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಮೊನ್ನೆ ಸಂಕ್ರಮಣ ದಿನದಂದು ನಡೆದ ದೈವರಾಧನೆಯ ಹೊತ್ತಲ್ಲಿ ಆಕ್ರೋಶ ಗರ್ಭಿತವಾಗಿ ನುಡಿದಿದೆ. ದೈವಗಳ ಆಚರಣೆ ಬಂದ್ ಮಾಡಿಸಲು ಮಂಗಳೂರು ವಿಶೇಷ ಆರ್ಥಿಕ ವಲಯ ಮುಂದಾಗಿದೆ. ಇದು ಮಂಗಳೂರಿನಲ್ಲಿ ಭಾರೀ ವಿವಾದ ಸೃಷ್ಟಿಸಿದೆ. ಎಂಎಸ್ಇಝಡ್ ವ್ಯಾಪ್ತಿಯಲ್ಲಿರುವ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ತಡೆ ಆರೋಪ ಎದುರಾಗಿದೆ. 800 ವರ್ಷಗಳ ಇತಿಹಾಸವಿರುವ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಘಟನೆ ನಡೆದಿದೆ. 2006ರಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಸಾವಿರಾರು ಎಕರೆ ಜನವಸತಿ ಜಾಗ ಸರ್ಕಾರದಿಂದ ಭೂ ಸ್ವಾಧೀನವಾಗಿತ್ತು. ಬಜ್ಪೆ, ಬಾಳ, ಕುತ್ತೆತ್ತೂರು, ಪೆರ್ಮುದೆ ಕಳವಾರು ಗ್ರಾಮದ ಸಾವಿರಾರು ಎಕರೆ ಭೂ ಸ್ವಾಧೀನವಾಗಿದೆ. ಸಮೃದ್ಧ ಗದ್ದೆಗಳು, ಸಾವಿರಾರು ನಾಗಬನಗಳು, ಬ್ರಹ್ಮಸ್ಥಾನಗಳು, ದೈವದ ಗುಡಿಗಳು, ಕೆರೆ, ತೊರೆ, ಶಾಲೆ, ಚರ್ಚು, ಮಸೀದಿ ಹೀಗೆ ಸಾವಿರಾರು ಮನೆಗಳು ಭೂ ಸ್ವಾಧೀನಕ್ಕೆ ನೆಲಸಮಗೊಂಡಿದೆ. ಆದರೆ 800 ವರ್ಷಗಳ ಇತಿಹಾಸವಿದ್ದ ನೆಲ್ಲಿದಡಿ ಗುತ್ತಿನ ದೇವಸ್ಥಾನ ಮುಟ್ಟಲಾಗಲಿಲ್ಲ. ನೆಲ್ಲಿದಡಿ ಗುತ್ತಿನ ಪೂರ್ತಿ ಜಾಗವನ್ನು ಕಂಪನಿ ಬಲಾತ್ಕಾರದಿಂದ ತನ್ನ ಹೆಸರಿಗೆ ಬರೆಸಿಕೊಂಡರೂ ದೈವಸ್ಥಾನ ಮಟ್ಟಲಾಗಲಿಲ್ಲ. ಸದ್ಯ ಕಂಪೆನಿ ಅಧಿಕಾರಿಗಳ ನಡೆಯ ವಿರುದ್ದ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…