ಜನ ಮನದ ನಾಡಿ ಮಿಡಿತ

Advertisement

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರಿಗೆ ಥಳಿತ

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರಿಗೆ ಥಳಿತ

ಉಡುಪಿ : ಉಡುಪಿ ನಗರದ ಸಿಟಿ ಸೆಂಟರ್‌ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಿಹಾಲ್ ಹಾಗೂ ಪೈಝಲ್ ಎಂದು ತಿಳಿದುಬಂದಿದೆ.

ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್‌ಗೆ ಹೋಗಿದ್ದರು. ಅಲ್ಲಿ ಮೂರನೇ ಮಹಡಿಯಿಂದ ಕೆಳಗೆ ಬರುವಾಗ ಲಿಫ್ಟ್ ಕೆಟ್ಟು ಹೋಗಿದ್ದರಿಂದ ಆಟೋಮ್ಯಾಟಿಕ್ ಎಕ್ಸಲೆಟರ್ ಮೇಲೆ ನಡೆದುಕೊಂಡು ಕೆಳಗೆ ಬರುತ್ತಿದ್ದಾಗ ಸಿಟಿ ಸೆಂಟರ್ ನ ಇಬ್ಬರು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿ ಎಕ್ಸಲೇಟರ್ ಮೇಲೆ ಏಕೆ ಬಂದಿದ್ದು ಅಂತ ತಗಾದೆ ತೆಗೆದು ವಿದ್ಯಾರ್ಥಿಗಳಿಗೆ ಮನಸೊ ಇಚ್ಛೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ನಿಹಾಲ್ ತುಟಿ ಒಡೆದು ಗಾಯವಾಗಿದೆ.ಪೈಝಲ್ ಎಂಬಾತನ ಹೊಟ್ಟೆ, ಬೆನ್ನು ಭಾಗಕ್ಕೆ ಕೈಯಿಂದ ಗುದ್ದಿ ಹಲ್ಲೆ ಮಾಡಿರುತ್ತಾರೆ. ತಕ್ಷಣ ಸ್ಥಳೀಯರು ವಿದ್ಯಾರ್ಥಿಗಳನ್ನು ಸಿಬ್ಬಂದಿಯ ಕೈಯಿಂದ ಪಾರು ಮಾಡಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!