ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರಿಗೆ ಥಳಿತ
ಉಡುಪಿ : ಉಡುಪಿ ನಗರದ ಸಿಟಿ ಸೆಂಟರ್ನ ಸಿಬ್ಬಂದಿಗಳು ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳಿಬ್ಬರನ್ನು ಥಳಿಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಗಳು ನಿಹಾಲ್ ಹಾಗೂ ಪೈಝಲ್ ಎಂದು ತಿಳಿದುಬಂದಿದೆ.
ಈ ಇಬ್ಬರು ವಿದ್ಯಾರ್ಥಿಗಳು ಕ್ಲಾಸ್ ಮುಗಿಸಿ, ಉಡುಪಿ ನಗರದಲ್ಲಿರುವ ಸಿಟಿ ಸೆಂಟರ್ಗೆ ಹೋಗಿದ್ದರು. ಅಲ್ಲಿ ಮೂರನೇ ಮಹಡಿಯಿಂದ ಕೆಳಗೆ ಬರುವಾಗ ಲಿಫ್ಟ್ ಕೆಟ್ಟು ಹೋಗಿದ್ದರಿಂದ ಆಟೋಮ್ಯಾಟಿಕ್ ಎಕ್ಸಲೆಟರ್ ಮೇಲೆ ನಡೆದುಕೊಂಡು ಕೆಳಗೆ ಬರುತ್ತಿದ್ದಾಗ ಸಿಟಿ ಸೆಂಟರ್ ನ ಇಬ್ಬರು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಿ ಎಕ್ಸಲೇಟರ್ ಮೇಲೆ ಏಕೆ ಬಂದಿದ್ದು ಅಂತ ತಗಾದೆ ತೆಗೆದು ವಿದ್ಯಾರ್ಥಿಗಳಿಗೆ ಮನಸೊ ಇಚ್ಛೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ನಿಹಾಲ್ ತುಟಿ ಒಡೆದು ಗಾಯವಾಗಿದೆ.ಪೈಝಲ್ ಎಂಬಾತನ ಹೊಟ್ಟೆ, ಬೆನ್ನು ಭಾಗಕ್ಕೆ ಕೈಯಿಂದ ಗುದ್ದಿ ಹಲ್ಲೆ ಮಾಡಿರುತ್ತಾರೆ. ತಕ್ಷಣ ಸ್ಥಳೀಯರು ವಿದ್ಯಾರ್ಥಿಗಳನ್ನು ಸಿಬ್ಬಂದಿಯ ಕೈಯಿಂದ ಪಾರು ಮಾಡಿ, ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…