ತೌಡುಗೋಳಿಯಲ್ಲಿ ತಡರಾತ್ರಿ ಅಂಗಡಿಗೆ ನುಗ್ಗಿದ ಕಳ್ಳ
ಕೊಣಾಜೆ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ನ ಅಂಗಡಿಯೊ೦ದರಿ೦ದ ನಗದು ಹಾಗೂ ಸಾಮಗ್ರಿಗಳನ್ನು ಕಳ್ಳತನಗೈದ ಘಟನೆ ನಡೆದಿದೆ.
ತೌಡುಗೋಳಿಯ ವಸಂತ ಮಲಿ ಮಾಲೀಕತ್ವದ ಅಂಗಡಿಗೆ ಸುಮಾರು ಎರಡೂವರೆ ಗಂಟೆ ರಾತ್ರಿ ರಾಡ್ ಸಮೇತ ನುಗ್ಗಿದ ದಢೂತಿ ದೇಹದ ಕಳ್ಳ ಹೊರಗಡೆಯ ಕಬ್ಬಿಣದ ಬಾಗಿಲಿಗೆ ಒಳಗೂ ಹೊರಗೂ ಹಾಕಿದ್ದ ಬೀಗವನ್ನು ಮುರಿದು ಒಳ ನುಗ್ಗಿದ್ದಾನೆ. ಅಲ್ಲಿಂದ ಕ್ಯಾ ಶ್ ಕೌಂಟರ್ ಇರುವ ಕೊಠಡಿಯ ಮರದ ಬಾಗಿಲಿನ ಬೀಗ ಮುರಿಯಲು ಸುಮಾರು ಅರ್ಧ ಗಂಟೆ ಒದ್ದಾಡಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳ ಅಂಗಡಿಗೆ ಬಂದ ಬಳಿಕ ಹಾಕಿದ್ದ ಟಿ ಶರ್ಟ್ ಅನ್ನು ಕಳಚಿದ್ದು ಕ್ಯಾಶ್ ಕೌಂಟರ್ ಗೆ ಒಳನುಗ್ಗುತ್ತಿದ್ದಂತೆಯೇ ಮುಖಕ್ಕೆ ಟೀ ಶರ್ಟ್ ಅನ್ನು ಕಟ್ಟಿಕೊಂಡಿದ್ದಾನೆ. ಪಕ್ಕದಲ್ಲಿದ್ದ ವೈಫೈ ಸಿಸ್ಟನ್ ಕದ್ದೊಯ್ದಿದ್ದು ಸಿಸಿಟಿಯ ಹಾರ್ಡ್ ಡಿಸ್ಕ್ ಎಂದು ಭಾವಿಸಿ ಕದ್ದಿರುವ ಶಂಕೆ ಇದೆ. ಒಟ್ಟಿನಲ್ಲಿ ಅಂದಾಜು ಸುಮಾರು 40 ಸಾವಿರ ರೂ. ಮೌಲ್ಯದ ಸಾಮಗ್ರಿಗಳನ್ನು ಕದ್ದೊಯ್ದಿದ್ದಾನೆ. ಆರೋಪಿಯ ಚಹರೆಯನ್ನು ಹೋಲುವಂತಹ ವ್ಯಕ್ತಿ ಕಳ್ಳತನಗೈದ ಕುರಿತಾಗಿ ಸುಮಾರು 10 ಪ್ರಕರಣಗಳು ದಾಖಲಾಗಿದ್ದು, ಎಲ್ಲೂ ಕೂಡಾ ಮುಖದ ಚಹರೆ ಸ್ಪಷ್ಟವಾಗಿ ಗೋಚರಿಸದಿದ್ದರೂ ಇಲ್ಲಿ ಮುಖ ಸ್ಪಷ್ಟವಾಗಿ ಗುರುತು ಹಿಡಿಯುವಷ್ಟು ನಿಖರವಾಗಿ ಕಾಣುತ್ತಿದೆ. ಸ್ಥಳೀಯರ ಮಾಹಿತಿ ಪ್ರಕಾರ ಆರೋಪಿ ಇದೇ ಅಂಗಡಿಯಿ೦ದ ತಿಂಗಳ ಹಿಂದೆ ಸಾಮಾನು ಖರೀದಿಸಿರುವ ಹಾಗೂ ಪಕ್ಕದ ಹೊಟೇಲ್ ನಲ್ಲಿ ಚಹಾ ಕುಡಿಯಲು ಬಂದಿರುವ ಮಾಹಿತಿ ಲಭ್ಯವಾಗಿದ್ದು, ಆರೋಪಿ ಕಳ್ಳತನಕ್ಕೆ ಬರುವಾಗ ಅಂಗಡಿಯಿ೦ದ ಸುಮಾರು 50 ಮೀಟರ್ ದೂರದಲ್ಲಿ ಕಾರನ್ನು ನಿಲ್ಲಿಸಿದ್ದಾನೆ.
ಪೊಲೀಸರು ಪರಿಶೀಲಿಸಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲೆ ದಾಖಲಾಗಿದೆ. ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…