ತೌಡುಗೋಳಿಯಲ್ಲಿ ತಡರಾತ್ರಿ ಅಂಗಡಿಗೆ ನುಗ್ಗಿದ ಕಳ್ಳ
ಕೊಣಾಜೆ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ನ ಅಂಗಡಿಯೊ೦ದರಿ೦ದ ನಗದು ಹಾಗೂ ಸಾಮಗ್ರಿಗಳನ್ನು ಕಳ್ಳತನಗೈದ ಘಟನೆ ನಡೆದಿದೆ.
ತೌಡುಗೋಳಿಯ ವಸಂತ ಮಲಿ ಮಾಲೀಕತ್ವದ ಅಂಗಡಿಗೆ ಸುಮಾರು ಎರಡೂವರೆ ಗಂಟೆ ರಾತ್ರಿ ರಾಡ್ ಸಮೇತ ನುಗ್ಗಿದ ದಢೂತಿ ದೇಹದ ಕಳ್ಳ ಹೊರಗಡೆಯ ಕಬ್ಬಿಣದ ಬಾಗಿಲಿಗೆ ಒಳಗೂ ಹೊರಗೂ ಹಾಕಿದ್ದ ಬೀಗವನ್ನು ಮುರಿದು ಒಳ ನುಗ್ಗಿದ್ದಾನೆ. ಅಲ್ಲಿಂದ ಕ್ಯಾ ಶ್ ಕೌಂಟರ್ ಇರುವ ಕೊಠಡಿಯ ಮರದ ಬಾಗಿಲಿನ ಬೀಗ ಮುರಿಯಲು ಸುಮಾರು ಅರ್ಧ ಗಂಟೆ ಒದ್ದಾಡಿದ್ದು ಕಳ್ಳನ ಕರಾಮತ್ತು ಸಿಸಿಟಿವಿಯಲ್ಲಿ ದಾಖಲಾಗಿದೆ. ಕಳ್ಳ ಅಂಗಡಿಗೆ ಬಂದ ಬಳಿಕ ಹಾಕಿದ್ದ ಟಿ ಶರ್ಟ್ ಅನ್ನು ಕಳಚಿದ್ದು ಕ್ಯಾಶ್ ಕೌಂಟರ್ ಗೆ ಒಳನುಗ್ಗುತ್ತಿದ್ದಂತೆಯೇ ಮುಖಕ್ಕೆ ಟೀ ಶರ್ಟ್ ಅನ್ನು ಕಟ್ಟಿಕೊಂಡಿದ್ದಾನೆ. ಪಕ್ಕದಲ್ಲಿದ್ದ ವೈಫೈ ಸಿಸ್ಟನ್ ಕದ್ದೊಯ್ದಿದ್ದು ಸಿಸಿಟಿಯ ಹಾರ್ಡ್ ಡಿಸ್ಕ್ ಎಂದು ಭಾವಿಸಿ ಕದ್ದಿರುವ ಶಂಕೆ ಇದೆ. ಒಟ್ಟಿನಲ್ಲಿ ಅಂದಾಜು ಸುಮಾರು 40 ಸಾವಿರ ರೂ. ಮೌಲ್ಯದ ಸಾಮಗ್ರಿಗಳನ್ನು ಕದ್ದೊಯ್ದಿದ್ದಾನೆ. ಆರೋಪಿಯ ಚಹರೆಯನ್ನು ಹೋಲುವಂತಹ ವ್ಯಕ್ತಿ ಕಳ್ಳತನಗೈದ ಕುರಿತಾಗಿ ಸುಮಾರು 10 ಪ್ರಕರಣಗಳು ದಾಖಲಾಗಿದ್ದು, ಎಲ್ಲೂ ಕೂಡಾ ಮುಖದ ಚಹರೆ ಸ್ಪಷ್ಟವಾಗಿ ಗೋಚರಿಸದಿದ್ದರೂ ಇಲ್ಲಿ ಮುಖ ಸ್ಪಷ್ಟವಾಗಿ ಗುರುತು ಹಿಡಿಯುವಷ್ಟು ನಿಖರವಾಗಿ ಕಾಣುತ್ತಿದೆ. ಸ್ಥಳೀಯರ ಮಾಹಿತಿ ಪ್ರಕಾರ ಆರೋಪಿ ಇದೇ ಅಂಗಡಿಯಿ೦ದ ತಿಂಗಳ ಹಿಂದೆ ಸಾಮಾನು ಖರೀದಿಸಿರುವ ಹಾಗೂ ಪಕ್ಕದ ಹೊಟೇಲ್ ನಲ್ಲಿ ಚಹಾ ಕುಡಿಯಲು ಬಂದಿರುವ ಮಾಹಿತಿ ಲಭ್ಯವಾಗಿದ್ದು, ಆರೋಪಿ ಕಳ್ಳತನಕ್ಕೆ ಬರುವಾಗ ಅಂಗಡಿಯಿ೦ದ ಸುಮಾರು 50 ಮೀಟರ್ ದೂರದಲ್ಲಿ ಕಾರನ್ನು ನಿಲ್ಲಿಸಿದ್ದಾನೆ.
ಪೊಲೀಸರು ಪರಿಶೀಲಿಸಿದ್ದು ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲೆ ದಾಖಲಾಗಿದೆ. ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…