ಸಹಕಾರಿ ಬಳಗಕ್ಕೆ ಜಯ….!ಸಹಕಾರ ಭಾರತಿಗೆ ಮುಖಬಂಗ…!
ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನ್ಯಾಯಾಲಯ ಆದೇಶದ ಅರ್ಹ ಮತದಾರರ ಮತದಾನದ ಹೊರತಾಗಿ ರಮೇಶ್ ಭಟ್ ಉಪ್ಪಂಗಳ ಸಹಕಾರಿ ಬಳಗ ಜಯಭೇರಿ ಭಾರಿಸಿದ್ದು, ಹನ್ನೆರಡು ಸ್ಥಾನಗಳ ಪೈಕಿ ಹತ್ತರಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ.
ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಕೇವಲ ಎರಡು ಸ್ಥಾನಗಳಲ್ಲಿ ಜಯ ಸಾಧಿಸಿ ತೀವ್ರ ಮುಖಬಂಗ ಅನುಭವಿಸಿದೆ. ಆದರೆ ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ ನೀಡಲಾಗಿದೆ. ಭಾರೀ ಜಿದ್ದಾಜಿದ್ದಿನ ಹೋರಾಟದಲ್ಲಿ ಬಿಜೆಪಿಯಿಂದ ಸಿಡಿದೆದ್ದಿರುವ ರಮೇಶ್ ಭಟ್ ಉಪ್ಪಂಗಳ ಬಳಗ ಮೇಲುಗೈ ಸಾಧಿಸಿದರೂ ಸಂಘದ ಸದಸ್ಯರೊಬ್ಬರು ನ್ಯಾಯಾಲಯದಿಂದ ಸುಮಾರು 440 ಅನರ್ಹ ಮತದಾರರಿಗೆ ಮತದಾನಕ್ಕೆ ಅರ್ಹತೆ ಪಡೆದು ಬಂದು ಮತದಾನಕ್ಕೆ ಅವಕಾಶ ದೊರೆತಿರುವುದುರಿಂದ ಸಹಕಾರ ಭಾರತಿ ಅಲ್ಲಿ ಮುನ್ನಡೆಯನ್ನು ಕಾಯ್ದುಕೊಂಡು ನ್ಯಾಯಾಲಯದಲ್ಲಿ ಗೆಲುವು ಸಾಧಿಸುವ ಆಶಾಭಾವನೆಯಲ್ಲಿದೆ. ಸಂಘದಿOದ ಅರ್ಹ ಮತದಾರರಿಗೆ ನಡೆದ ಮತದಾನ ಹಾಗೂ ನ್ಯಾಯಲಯದಿಂದ ಅರ್ಹತೆ ಪಡೆದು ನಡೆದ ಮತದಾನದ ಒಟ್ಟು ಮತಗಳ ಕ್ರೂಢೀಕರಣವಾದರೆ ಸಹಕಾರ ಭಾರತಿ ಮೇಲುಗೈ ಸಾಧಿಸಲಿದೆ ಎನ್ನುವ ಲೆಕ್ಕಚಾರ ನಡೆಯುತ್ತಿದೆ.
ಈ ಸಂದರ್ಭದಲ್ಲಿ ಉಪ್ಪಂಗಳ ಸಹಕಾರಿ ಬಳಗದ ಮುಖಂಡರಾದ ರಮೇಶ್ ಎನ್.ಸಿ., ಜನಾರ್ಧನ ಗೌಡ ಕಯ್ಯಪೆ, ಸುಪ್ರಿತ್ ರೈ ಕೊಯಿಲ, ಶೇಖರ ಹಿರಿಂಜ ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…