ಜನ ಮನದ ನಾಡಿ ಮಿಡಿತ

Advertisement

ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು – ಡಿಕೆಶಿ

ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು – ಡಿಕೆಶಿ

 

ಕಾಪು : ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಾಪುವಿನ ಶ್ರೀ ಹೊಸಮಾರಿಗುಡಿ ದೇಗುಲದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ ಅರ್ಪಿಸಿಕೊಳ್ಳುತ್ತಾಳೆ ಎಂದು ಪುರೋಹಿತರು ಹೇಳಿದರು. ಏಕೆಂದರೆ ಭಕ್ತರು ಭಕ್ತಿಯಿಂದ ನೀಡಿದ್ದನ್ನು ತಾಯಿ ಬೇಡ ಎನ್ನುವುದಿಲ್ಲ. ಭಕ್ತಿಗೆ ದೊಡ್ಡ ಶಕ್ತಿಯಿದೆ” ಎಂದಿದ್ದಾರೆ. ಸರ್ಕಾರದ ಸಹಾಯವಿಲ್ಲದೇ ಭಕ್ತರ ಸಣ್ಣ ಹಾಗೂ ದೊಡ್ಡ ನೆರವಿನಿಂದ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಾಣ ಮಾಡಲಾಗಿದೆ. ಇಂತಹ ವಿಜೃಂಭಣೆಯಿOದ ಕೂಡಿರುವ ದೇವಸ್ಥಾನವನ್ನು ನಾನು ಕರ್ನಾಟಕದಲ್ಲಿ ಎಲ್ಲಿಯೂ ನೋಡಿಲ್ಲ”. ನಮ್ಮ ಸಂಸ್ಕೃತಿಯಲ್ಲಿ ಸ್ತ್ರೀ ದೇವತೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಪ್ರತಿ ಊರಿಗೆ ಹೋದಾಗಲೂ ಮೊದಲು ಕೇಳುವುದು ಇಲ್ಲಿನ ಗ್ರಾಮ ದೇವತೆ ಯಾವುದು ಎಂದು. ಪ್ರತಿ ದೇವರ ಹೆಸರಿನ ಮುಂಭಾಗ ಪತ್ನಿಯರ ಹೆಸರನ್ನು ಸೇರಿಸಿ ಕರೆಯಲಾಗುತ್ತದೆ. ಉದಾಹರಣೆಗೆ ಲಕ್ಷ್ಮೀ ವೆಂಕಟೇಶ್ವರ, ಶಿವ ಪಾರ್ವತಿ ಎಂದು ಹೇಳುತ್ತೇವೆ. ನಾವು ಹುಟ್ಟಿದ ದೇಶವನ್ನು ಮಾತೃಭೂಮಿ ಎಂದರೆ, ಮಾತಾಡುವ ಭಾಷೆಯನ್ನು ಮಾತೃಭಾಷೆ ಎನ್ನುತ್ತಾರೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!