ಜನ ಮನದ ನಾಡಿ ಮಿಡಿತ

Advertisement

ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು – ಡಿಕೆಶಿ

ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು – ಡಿಕೆಶಿ

 

ಕಾಪು : ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಾಪುವಿನ ಶ್ರೀ ಹೊಸಮಾರಿಗುಡಿ ದೇಗುಲದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ ಅರ್ಪಿಸಿಕೊಳ್ಳುತ್ತಾಳೆ ಎಂದು ಪುರೋಹಿತರು ಹೇಳಿದರು. ಏಕೆಂದರೆ ಭಕ್ತರು ಭಕ್ತಿಯಿಂದ ನೀಡಿದ್ದನ್ನು ತಾಯಿ ಬೇಡ ಎನ್ನುವುದಿಲ್ಲ. ಭಕ್ತಿಗೆ ದೊಡ್ಡ ಶಕ್ತಿಯಿದೆ” ಎಂದಿದ್ದಾರೆ. ಸರ್ಕಾರದ ಸಹಾಯವಿಲ್ಲದೇ ಭಕ್ತರ ಸಣ್ಣ ಹಾಗೂ ದೊಡ್ಡ ನೆರವಿನಿಂದ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಾಣ ಮಾಡಲಾಗಿದೆ. ಇಂತಹ ವಿಜೃಂಭಣೆಯಿOದ ಕೂಡಿರುವ ದೇವಸ್ಥಾನವನ್ನು ನಾನು ಕರ್ನಾಟಕದಲ್ಲಿ ಎಲ್ಲಿಯೂ ನೋಡಿಲ್ಲ”. ನಮ್ಮ ಸಂಸ್ಕೃತಿಯಲ್ಲಿ ಸ್ತ್ರೀ ದೇವತೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಪ್ರತಿ ಊರಿಗೆ ಹೋದಾಗಲೂ ಮೊದಲು ಕೇಳುವುದು ಇಲ್ಲಿನ ಗ್ರಾಮ ದೇವತೆ ಯಾವುದು ಎಂದು. ಪ್ರತಿ ದೇವರ ಹೆಸರಿನ ಮುಂಭಾಗ ಪತ್ನಿಯರ ಹೆಸರನ್ನು ಸೇರಿಸಿ ಕರೆಯಲಾಗುತ್ತದೆ. ಉದಾಹರಣೆಗೆ ಲಕ್ಷ್ಮೀ ವೆಂಕಟೇಶ್ವರ, ಶಿವ ಪಾರ್ವತಿ ಎಂದು ಹೇಳುತ್ತೇವೆ. ನಾವು ಹುಟ್ಟಿದ ದೇಶವನ್ನು ಮಾತೃಭೂಮಿ ಎಂದರೆ, ಮಾತಾಡುವ ಭಾಷೆಯನ್ನು ಮಾತೃಭಾಷೆ ಎನ್ನುತ್ತಾರೆ” ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!