ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು – ಡಿಕೆಶಿ
ಕಾಪು : ನಾವೆಲ್ಲರೂ ಮಾನವೀಯತೆಗೆ ತಲೆಬಾಗಬೇಕು. ಮಾನವ ಧರ್ಮವನ್ನು ಉಳಿಸಿಕೊಳ್ಳಬೇಕು. ಯಾರಿಗೂ ತೊಂದರೆ ಕೊಡದಂತೆ ನಮ್ಮ ಧರ್ಮದ ದಾರಿಯಲ್ಲಿ ನಾವು ಬದುಕಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಇತಿಹಾಸ ಪ್ರಸಿದ್ಧ ಕಾಪುವಿನ ಶ್ರೀ ಹೊಸಮಾರಿಗುಡಿ ದೇಗುಲದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಾರಿಯಮ್ಮ ಎಲ್ಲರೂ ನೀಡುವ ಹಣ್ಣು, ಹೂವು ಜೊತೆಗೆ ಕೋಳಿಯನ್ನು ಸಹ ಅರ್ಪಿಸಿಕೊಳ್ಳುತ್ತಾಳೆ ಎಂದು ಪುರೋಹಿತರು ಹೇಳಿದರು. ಏಕೆಂದರೆ ಭಕ್ತರು ಭಕ್ತಿಯಿಂದ ನೀಡಿದ್ದನ್ನು ತಾಯಿ ಬೇಡ ಎನ್ನುವುದಿಲ್ಲ. ಭಕ್ತಿಗೆ ದೊಡ್ಡ ಶಕ್ತಿಯಿದೆ” ಎಂದಿದ್ದಾರೆ. ಸರ್ಕಾರದ ಸಹಾಯವಿಲ್ಲದೇ ಭಕ್ತರ ಸಣ್ಣ ಹಾಗೂ ದೊಡ್ಡ ನೆರವಿನಿಂದ ಅತ್ಯದ್ಭುತವಾಗಿ ಮಾರಿಗುಡಿಯನ್ನು ನಿರ್ಮಾಣ ಮಾಡಲಾಗಿದೆ. ಇಂತಹ ವಿಜೃಂಭಣೆಯಿOದ ಕೂಡಿರುವ ದೇವಸ್ಥಾನವನ್ನು ನಾನು ಕರ್ನಾಟಕದಲ್ಲಿ ಎಲ್ಲಿಯೂ ನೋಡಿಲ್ಲ”. ನಮ್ಮ ಸಂಸ್ಕೃತಿಯಲ್ಲಿ ಸ್ತ್ರೀ ದೇವತೆಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗಿದೆ. ಪ್ರತಿ ಊರಿಗೆ ಹೋದಾಗಲೂ ಮೊದಲು ಕೇಳುವುದು ಇಲ್ಲಿನ ಗ್ರಾಮ ದೇವತೆ ಯಾವುದು ಎಂದು. ಪ್ರತಿ ದೇವರ ಹೆಸರಿನ ಮುಂಭಾಗ ಪತ್ನಿಯರ ಹೆಸರನ್ನು ಸೇರಿಸಿ ಕರೆಯಲಾಗುತ್ತದೆ. ಉದಾಹರಣೆಗೆ ಲಕ್ಷ್ಮೀ ವೆಂಕಟೇಶ್ವರ, ಶಿವ ಪಾರ್ವತಿ ಎಂದು ಹೇಳುತ್ತೇವೆ. ನಾವು ಹುಟ್ಟಿದ ದೇಶವನ್ನು ಮಾತೃಭೂಮಿ ಎಂದರೆ, ಮಾತಾಡುವ ಭಾಷೆಯನ್ನು ಮಾತೃಭಾಷೆ ಎನ್ನುತ್ತಾರೆ” ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…