ಸುಭಾಶ್ಚಂದ್ರರರು ಇನ್ನೆರಡು ವರ್ಷ ಬದುಕುಳಿದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ – ಜಗದೀಶ್ ಕಾರಂತ್
ಬಿ.ಸಿ.ರೋಡ್ : ಭಾರತದ ಸ್ವಾಭಿಮಾನವನ್ನು ಬಡಿದ್ದೆಬ್ಬಿಸಿದ ಸಿಡಿಲ ಸಂತ ಸ್ವಾಮಿ ವಿವೇಕಾನಂದರು ಹಾಗೂ ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಹೊಸ ಮುನ್ನುಡಿಯನ್ನು ಬರೆದ ನೇತಾಜಿ ಸುಭಾಷ್ ಚಂದ್ರ ಬೋಸ್ರಂತಹ ಮಹಾನ್ ವ್ಯಕ್ತಿಗಳು ಪ್ರಸ್ತುತ ಕಾಲಘಟ್ಟದಲ್ಲೂ ಭಾರತದ ಯುವ ಪೀಳಿಗೆಗೆ ಪ್ರೇರಣೆ ಮತ್ತು ಸ್ಪೂರ್ತಿಯಾಗಿದ್ದಾರೆ ಎಂದು ಹಿ.ಜಾ.ವೇ.ಯ ಕ್ಷೇತ್ರೀಯ ಸಂಯೋಜಕರಾದ ಜಗದೀಶ್ ಕಾರಂತ್ ಹೇಳಿದ್ದಾರೆ.
ಇವರು ಬಿ.ಸಿ.ರೋಡಿನ ಶ್ರೀ ರಕೇಶ್ವರೀ ದೇವಸ್ಥಾನದ ಮುಂಭಾಗದಲ್ಲಿ ಹಿಂದೂ ಜಾಗರಣ ವೇದಿಕೆ, ಬಂಟ್ವಾಳ ತಾಲೂಕು,ಮಂಗಳೂರು ಗ್ರಾಮಾಂತರ ಜಿಲ್ಲೆಯ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದ ಮತ್ತು ನೇತಾಜಿ ಸುಭಾಷ್ ಚಂದ್ರಬೋಸ್ ಅವರುಗಳ ಜನ್ಮ ಜಯಂತಿಯ ಪ್ರಯುಕ್ತ ನಡೆದ “ಹಿಂದೂ ಯುವ ಸಮಾವೇಶ”ದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. ಸ್ವಾಮಿ ವಿವೇಕಾನಂದರು ಅಪ್ಪಟ ರಾಷ್ಟ್ರ ಭಕ್ತರಾಗಿದ್ದರು. ದೈರ್ಯ,ಸಾಹಸ, ಪರಾಕ್ರಮ ಎಲ್ಲಾ ಸದ್ಗುಣಗಳ ಸಮುಚ್ಚಯವನ್ನು ಮೈಗೂಡಿಸಿರುವ ಕ್ರಾಂತಿಕಾರಿ ಸುಭಾಶ್ಚಂದ್ರ ಭೋಸ್ ಅವರು ಬ್ರಿಟಿಷರ ವಿರುದ್ದ ಸೇಡು ತೀರಿಸಲು ಸನ್ನದ್ದರಾಗಿದ್ದರು. ಆದರೆ ಅಹಿಂಸಾ ತತ್ವದಡಿಯಲ್ಲಿ ಮಹಾತ್ಮಗಾಂಧಿ ಮತ್ತವರ ಟೀಂ ಅಸಹಕಾರ ನೀಡಿದ್ದರಿಂದ ಇದು ಸಾಧ್ಯವಾಗಿಲ್ಲ. ಸುಭಾಶ್ಚಂದ್ರರವರು ಇನ್ನೆರಡು ವರ್ಷ ಬದುಕುಳಿದಿದ್ದರೆ ದೇಶವಿಭಜನೆಯಾಗುತ್ತಿರಲಿಲ್ಲ. ಅಂದಿನ ನಮ್ಮ ನಾಯಕತ್ವದ ದೌರ್ಬಲ್ಯದಿಂದಾಗಿಯೇ ದೇಶ ವಿಭಜನೆಯಾಗುವಂತಾಯಿತು ಎಂದು ವಿಶ್ಲೇಷಿಸಿದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…