ಜನ ಮನದ ನಾಡಿ ಮಿಡಿತ

Advertisement

ತೋಟದ ಮನೆಯಲ್ಲಿ ವೃದ್ದ ದಂಪತಿ ಕೊಲೆ

ತೋಟದ ಮನೆಯಲ್ಲಿ ವೃದ್ದ ದಂಪತಿ ಕೊಲೆ

ಹುಣಸೂರು : ಹಾಡು ಹಗಲೇ ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ವೃದ್ದ ದಂಪತಿಯನ್ನು ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯಲ್ಲಿ ನಡೆದಿದೆ.

ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ ಹಾಗೂ ಇವರ ಪತ್ನಿ ಶಾಂತಮ್ಮ ಮೃತಪಟ್ಟಿದ್ದಾರೆ. ಮೃತ ದಂಪತಿಗೆ ಗ್ರಾ.ಪಂ.ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದು, ಒಬ್ಬಳು ಮಗಳಿದ್ದಾಳೆ. ತೋಟದ ಮನೆಯಲ್ಲಿ ವಾಸವಿರುವ ರಂಗಸ್ವಾಮಿಗೌಡ ಮತ್ತವರ ಪತ್ನಿಯನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆಂಬುದು ತಿಳಿದು ಬಂದಿಲ್ಲ. ಪುತ್ರ ದೇವರಾಜ್ ಜಮೀನಿನಲ್ಲಿ ಶುಂಠಿ ಕೀಳುತ್ತಿದ್ದ ವೇಳೆ ಶುಂಠಿ ತುಂಬಲು ಕುಕ್ಕೆ ತರುವಂತೆ ಕಾರ್ಮಿಕ ಗಣೇಶನನ್ನು ತಂದೆಯ ತೋಟದ ಮನೆಗೆ ಕಳುಹಿಸಿದ ವೇಳೆ ಮನೆಯೊಳಗೆ ಶಾಂತಮ್ಮ ಹಾಗೂ ರಂಗಸ್ವಾಮಿಗೌಡ ದನದ ಕೊಟ್ಟಿಗೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದ್ದು. ತಕ್ಷಣವೇ ದೇವರಾಜ್‍ಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!