ತೋಟದ ಮನೆಯಲ್ಲಿ ವೃದ್ದ ದಂಪತಿ ಕೊಲೆ
ಹುಣಸೂರು : ಹಾಡು ಹಗಲೇ ಖಾರ ಆಡಿಸುವ ಕಲ್ಲಿನಿಂದ ಜಜ್ಜಿ ವೃದ್ದ ದಂಪತಿಯನ್ನು ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನ ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿಗೌಡ ಹಾಗೂ ಇವರ ಪತ್ನಿ ಶಾಂತಮ್ಮ ಮೃತಪಟ್ಟಿದ್ದಾರೆ. ಮೃತ ದಂಪತಿಗೆ ಗ್ರಾ.ಪಂ.ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಮಕ್ಕಳಿದ್ದು, ಒಬ್ಬಳು ಮಗಳಿದ್ದಾಳೆ. ತೋಟದ ಮನೆಯಲ್ಲಿ ವಾಸವಿರುವ ರಂಗಸ್ವಾಮಿಗೌಡ ಮತ್ತವರ ಪತ್ನಿಯನ್ನು ಯಾವ ಕಾರಣಕ್ಕೆ ಕೊಲೆ ಮಾಡಿದ್ದಾರೆಂಬುದು ತಿಳಿದು ಬಂದಿಲ್ಲ. ಪುತ್ರ ದೇವರಾಜ್ ಜಮೀನಿನಲ್ಲಿ ಶುಂಠಿ ಕೀಳುತ್ತಿದ್ದ ವೇಳೆ ಶುಂಠಿ ತುಂಬಲು ಕುಕ್ಕೆ ತರುವಂತೆ ಕಾರ್ಮಿಕ ಗಣೇಶನನ್ನು ತಂದೆಯ ತೋಟದ ಮನೆಗೆ ಕಳುಹಿಸಿದ ವೇಳೆ ಮನೆಯೊಳಗೆ ಶಾಂತಮ್ಮ ಹಾಗೂ ರಂಗಸ್ವಾಮಿಗೌಡ ದನದ ಕೊಟ್ಟಿಗೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದ್ದು. ತಕ್ಷಣವೇ ದೇವರಾಜ್ಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…