ಮಂಗಳೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ದ.ಕ. ಜಿಲ್ಲೆಗೆ ಅನ್ಯಾಯಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ದ.ಕ ಜಿಲ್ಲಾ ಸಮಿತಿ ವತಿಯಿಂದ ಶನಿವಾರ ಪಿವಿಎಸ್ ಬಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ರಾಜ್ಯ ಸರಕಾರ ಮಂಡಿಸಿರುವ ಬಜೆಟ್ ಜನ ವಿರೋಧಿ, ದಲಿತ, ಕೃಷಿಕರ ವಿರೋಧಿಯಾಗಿದ್ದು ಜಿಲ್ಲೆಯ ಅಭಿವೃದ್ಧಿ ಗೆ ಬಜೆಟ್ ನಲ್ಲಿ ಯಾವುದೇ ಅನುದಾನ ಘೋಷಿಸಿಲ್ಲ ಎಂದು ಆರೋಪಿಸಿದರು. ಬಳಿಕ ನವಭಾರತ ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ವಾಪಾಸಾದರು.

ದಕ್ಷಿಣ ಮಂಡಲ ಅಧ್ಯಕ್ಷ ರಮೇಶ್ ಕಂಡೆಟ್ಟು, ಜಿಲ್ಲಾ ಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ರಾಕೇಶ್ ರೈ, ಶಾಂತಿ ಪ್ರಸಾದ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಡಾ| ಮಂಜುಳಾ ರಾವ್, ಪ್ರಮುಖರಾದ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಮನೋಜ್ ಕುಮಾರ್, ಸುಧೀರ್ ಶೆಟ್ಟಿ, ಜಯಾನಂದ ಅಂಚನ್, ದಿವಾಕರ ಪಾಂಡೇಶ್ವರ, ವಸಂತ ಪೂಜಾರಿ, ಜಿಲ್ಲಾ ಪದಾಧಿಕಾರಿಗಳು ವಿವಿಧ ಮಂಡಲ ಮೋರ್ಚಾ ಪದಾಧಿಕಾರಿಗಳು, ಮನಪಾ ಮಾಜಿ ಸದಸ್ಯರು ಭಾಗವಹಿಸಿದ್ದರು.
ಪ್ರ.ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ ಸ್ವಾಗತಿಸಿ. ಯತೀಶ್ ಆರ್ವಾರ್ ನಿರೂಪಿಸಿದರು.



