ಕರಾವಳಿ

ಸ್ಥಗಿತಗೊಂಡಿರುವ ರಾಜಕಾಲುವೇ ಕಾಮಗಾರಿ ಪೂರ್ಣಗಿಳಿಸಿ: ಸತ್ಯಪ್ಪ ಅಧ್ಯಕ್ಷರು , ಎಂ.ಎ.ಎಸ್‌ ಫೌಂಡೇಶನ್‌

ಮಂಜುನಾಥ ಬಡಾವಣೆಯ ರಾಜಕಾಲುವೆ ಸುಮಾರು 3 ಕೋಟಿಗಳಿಗೆ ಕೈಗೆತ್ತಿಕೊಂಡು ಕಾಮಗಾರಿ ಅರ್ಧಂಬರ್ಧ ಮಾಡಿ ನಾಪತ್ತೆಯಾದ ಗುತ್ತಿಗೆದಾರ, ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು.

ಹುಣಸೂರು ನಗರದ ಹೃದಯಭಾಗದಲ್ಲಿರುವ ಮಾರುತಿ ಬಡಾವಣೆ, ಮಂಜುನಾಥ ಬಡಾವಣೆಗಳಲ್ಲಿ ರಾಜಕಾಲುವೆ ಹಾದು ಹೋಗುತ್ತಿದ್ದು, ಸದರಿ ರಾಜಕಾಲುವೆ ಸಂಪೂರ್ಣವಾಗಿ ಮುಚ್ಚಿ ಹೋಗಿದ್ದು, ಇದರಿಂದಾಗಿ ಪ್ರತಿಬಾರಿಯೂ ಮಳೆಗಾಲ ಬಂದಾಗ ರಾಜಕಾಲುವೆಯಲ್ಲಿ ಹರಿದು ಹೋಗಬೇಕಾದ ಕೊಳಚೆ ನೀರು, ಮಳೆನೀರು ಈ ಭಾಗದ ಜನರ ಮನೆಗಳಿಗೆ ನುಗ್ಗಿ ಅಪಾರ ನಷ್ಟ ಅನುಭವಿಸಿದ್ದು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸತ್ಯ ಎಂ.ಎ.ಎಸ್‌ ಫೌಂಡೇಶನ್‌ ಸ್ಥಳೀಯ ಜನರೊಂದಿಗೆ ಹಲವಾರು ಹೋರಾಟ ಪ್ರತಿಭಟನೆಗಳ ಮುಖಾಂತರ ಮೈಸೂರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರ ಮೇರೆಗೆ ಜಿಲ್ಲಾಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ಗಮನಕ್ಕೆ ತಂದಿದ್ದು, ರಾಜಕಾಲುವೆ ನಿರ್ಮಾಣಕ್ಕಾಗಿ ಟೆಂಡರ್‌ ಕರೆದಿದ್ದರು.

 

ಅದರಂತೆ ಮಂಜುನಾಥ ಬಡಾವಣೆಯಲ್ಲಿ ರಾಜಕಾಲುವೆ ನಿರ್ಮಾಣ, ಕೇಂಬ್ರಿಡ್ಜ್‌ ಶಾಲೆಯಿಂದ ಮಾರುತಿ ಬಡಾವಣೆಯವರೆಗೆ ಡ್ರೈನೇಜ್‌ ಕಾಮಗಾರಿ, ಶಬ್ಬೀರ್‌ ನಗರದ ಬಳಿ ಕ್ರಾಸ್‌ ಡೆಕ್‌ ಕಾಮಗಾರಿಗಳಿಗೆ ಟೆಂಡರ್‌ ಕರೆದಿದ್ದು, ಬೆಂಗಳೂರು ಮೂಲದ ವಾಸು ಎಂಬುವರು 3 ಕೋಟಿ ರೂ. ಗಳಿಗೆ ಗುತ್ತಿಗೆ ಪಡೆದು ಕಾಮಗಾರಿ ಪ್ರಾರಂಭ ಮಾಡಿದ್ದು, ಬಿಲ್‌ ಆಗಲಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯನ್ನು ಅರ್ಧಂಬರ್ಧಕ್ಕೆ ನಿಲ್ಲಿಸಿ ವಾಪಸ್ಸು ಹೊರಟು ಹೋಗಿರುತ್ತಾರೆ. ಇದರಿಂದಾಗಿ ಸಾರ್ವಜನಿಕರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.ಇನ್ನೇನು ಮಳೆಗಾಲ ಪ್ರಾರಂಭವಾಗಲಿದ್ದು, ಪ್ರತಿಬಾರಿಯಂತೆ ಈ ಬಾರಿಯೂ ನರಕಯಾತನೆಗೆ ಸಿದ್ಧರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.

ಗುತ್ತಿಗೆ ಪಡೆದ ವಾಸು ರವರು ಕಾಮಗಾರಿ ಸಂಪೂರ್ಣಗೊಳಿಸದೆ ಅರ್ಧಕ್ಕೆ ನಿಲ್ಲಿಸಿರುವುದು ಜನಪ್ರತಿನಿಧಿಗಳ ಗಮನಕ್ಕೆ ಬಂದರೂ ಇವರ ಮೇಲೆ ಕೇಸ್‌ ದಾಖಲಿಸದೆ ಹಾಗೂ ಇವರನ್ನು ಕಪ್ಪುಪಟ್ಟಿಗೆ ಸೇರಿಸುವ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತೆ ವಹಿಸಿರುತ್ತಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಈ ರೀತಿ ನಿರ್ಲಕ್ಷ್ಯತೆ ವಹಿಸಿರುವುದು ಅತ್ಯಂತ ವಿಷಾದನೀಯ ಸಂಗತಿ.

ಕೂಡಲೇ ರಾಜಕಾಲುವೆ ಹಾಗೂ ಟೆಂಡರ್‌ ಕರೆದಿರುವ ಎಲ್ಲಾ ಕಾಮಗಾರಿಗಳನ್ನು ಇನ್ನು ಹದಿನೈದು ದಿನಗಳ ಒಳಗಾಗಿ ಗುತ್ತಿಗೆದಾರ ಕಾಮಗಾರಿ ಪ್ರಾರಂಭಿಸಬೇಕೆಂದು ಮಾಧ್ಯಮದ ಮುಖಾಂತರ ಒತ್ತಾಯಿಸುತ್ತೇನೆ. ತಪ್ಪಿದಲ್ಲಿ ಜನಪ್ರತಿನಿಧಿಗಳ ಅಧಿಕಾರಿಗಳ ನಿರ್ಲಕ್ಷ್ಯತೆ ಖಂಡಿಸಿ ಆ ಭಾಗದ ನಿವಾಸಿಗಳೊಂದಿಗೆ ನಗರಸಭೆ ಎದುರು ಪ್ರತಿಭಟನಾ ಧರಣಿ ಕೈಗೊಂಡು ಸರ್ಕಾರದ ಗಮನಕ್ಕೆ ತರಲಾಗುವುದು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

9 mins ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

15 mins ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

19 mins ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

23 hours ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

23 hours ago

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…

23 hours ago