ಮಂಜುನಾಥ ಬಡಾವಣೆಯ ರಾಜಕಾಲುವೆ ಸುಮಾರು 3 ಕೋಟಿಗಳಿಗೆ ಕೈಗೆತ್ತಿಕೊಂಡು ಕಾಮಗಾರಿ ಅರ್ಧಂಬರ್ಧ ಮಾಡಿ ನಾಪತ್ತೆಯಾದ ಗುತ್ತಿಗೆದಾರ, ಕಣ್ಮುಚ್ಚಿ ಕುಳಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು.
ಹುಣಸೂರು ನಗರದ ಹೃದಯಭಾಗದಲ್ಲಿರುವ ಮಾರುತಿ ಬಡಾವಣೆ, ಮಂಜುನಾಥ ಬಡಾವಣೆಗಳಲ್ಲಿ ರಾಜಕಾಲುವೆ ಹಾದು ಹೋಗುತ್ತಿದ್ದು, ಸದರಿ ರಾಜಕಾಲುವೆ ಸಂಪೂರ್ಣವಾಗಿ ಮುಚ್ಚಿ ಹೋಗಿದ್ದು, ಇದರಿಂದಾಗಿ ಪ್ರತಿಬಾರಿಯೂ ಮಳೆಗಾಲ ಬಂದಾಗ ರಾಜಕಾಲುವೆಯಲ್ಲಿ ಹರಿದು ಹೋಗಬೇಕಾದ ಕೊಳಚೆ ನೀರು, ಮಳೆನೀರು ಈ ಭಾಗದ ಜನರ ಮನೆಗಳಿಗೆ ನುಗ್ಗಿ ಅಪಾರ ನಷ್ಟ ಅನುಭವಿಸಿದ್ದು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸತ್ಯ ಎಂ.ಎ.ಎಸ್ ಫೌಂಡೇಶನ್ ಸ್ಥಳೀಯ ಜನರೊಂದಿಗೆ ಹಲವಾರು ಹೋರಾಟ ಪ್ರತಿಭಟನೆಗಳ ಮುಖಾಂತರ ಮೈಸೂರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದರ ಮೇರೆಗೆ ಜಿಲ್ಲಾಧಿಕಾರಿಗಳು ಖುದ್ದು ಸ್ಥಳ ಪರಿಶೀಲನೆ ಮಾಡಿ ಸರ್ಕಾರದ ಗಮನಕ್ಕೆ ತಂದಿದ್ದು, ರಾಜಕಾಲುವೆ ನಿರ್ಮಾಣಕ್ಕಾಗಿ ಟೆಂಡರ್ ಕರೆದಿದ್ದರು.
ಅದರಂತೆ ಮಂಜುನಾಥ ಬಡಾವಣೆಯಲ್ಲಿ ರಾಜಕಾಲುವೆ ನಿರ್ಮಾಣ, ಕೇಂಬ್ರಿಡ್ಜ್ ಶಾಲೆಯಿಂದ ಮಾರುತಿ ಬಡಾವಣೆಯವರೆಗೆ ಡ್ರೈನೇಜ್ ಕಾಮಗಾರಿ, ಶಬ್ಬೀರ್ ನಗರದ ಬಳಿ ಕ್ರಾಸ್ ಡೆಕ್ ಕಾಮಗಾರಿಗಳಿಗೆ ಟೆಂಡರ್ ಕರೆದಿದ್ದು, ಬೆಂಗಳೂರು ಮೂಲದ ವಾಸು ಎಂಬುವರು 3 ಕೋಟಿ ರೂ. ಗಳಿಗೆ ಗುತ್ತಿಗೆ ಪಡೆದು ಕಾಮಗಾರಿ ಪ್ರಾರಂಭ ಮಾಡಿದ್ದು, ಬಿಲ್ ಆಗಲಿಲ್ಲ ಎಂಬ ಕಾರಣಕ್ಕೆ ಕಾಮಗಾರಿಯನ್ನು ಅರ್ಧಂಬರ್ಧಕ್ಕೆ ನಿಲ್ಲಿಸಿ ವಾಪಸ್ಸು ಹೊರಟು ಹೋಗಿರುತ್ತಾರೆ. ಇದರಿಂದಾಗಿ ಸಾರ್ವಜನಿಕರು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.ಇನ್ನೇನು ಮಳೆಗಾಲ ಪ್ರಾರಂಭವಾಗಲಿದ್ದು, ಪ್ರತಿಬಾರಿಯಂತೆ ಈ ಬಾರಿಯೂ ನರಕಯಾತನೆಗೆ ಸಿದ್ಧರಾಗಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ.
ಗುತ್ತಿಗೆ ಪಡೆದ ವಾಸು ರವರು ಕಾಮಗಾರಿ ಸಂಪೂರ್ಣಗೊಳಿಸದೆ ಅರ್ಧಕ್ಕೆ ನಿಲ್ಲಿಸಿರುವುದು ಜನಪ್ರತಿನಿಧಿಗಳ ಗಮನಕ್ಕೆ ಬಂದರೂ ಇವರ ಮೇಲೆ ಕೇಸ್ ದಾಖಲಿಸದೆ ಹಾಗೂ ಇವರನ್ನು ಕಪ್ಪುಪಟ್ಟಿಗೆ ಸೇರಿಸುವ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತೆ ವಹಿಸಿರುತ್ತಾರೆ. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಈ ರೀತಿ ನಿರ್ಲಕ್ಷ್ಯತೆ ವಹಿಸಿರುವುದು ಅತ್ಯಂತ ವಿಷಾದನೀಯ ಸಂಗತಿ.
ಕೂಡಲೇ ರಾಜಕಾಲುವೆ ಹಾಗೂ ಟೆಂಡರ್ ಕರೆದಿರುವ ಎಲ್ಲಾ ಕಾಮಗಾರಿಗಳನ್ನು ಇನ್ನು ಹದಿನೈದು ದಿನಗಳ ಒಳಗಾಗಿ ಗುತ್ತಿಗೆದಾರ ಕಾಮಗಾರಿ ಪ್ರಾರಂಭಿಸಬೇಕೆಂದು ಮಾಧ್ಯಮದ ಮುಖಾಂತರ ಒತ್ತಾಯಿಸುತ್ತೇನೆ. ತಪ್ಪಿದಲ್ಲಿ ಜನಪ್ರತಿನಿಧಿಗಳ ಅಧಿಕಾರಿಗಳ ನಿರ್ಲಕ್ಷ್ಯತೆ ಖಂಡಿಸಿ ಆ ಭಾಗದ ನಿವಾಸಿಗಳೊಂದಿಗೆ ನಗರಸಭೆ ಎದುರು ಪ್ರತಿಭಟನಾ ಧರಣಿ ಕೈಗೊಂಡು ಸರ್ಕಾರದ ಗಮನಕ್ಕೆ ತರಲಾಗುವುದು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…